ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ನಡೆಸುತ್ತಿದ್ದು ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಮೈತ್ರಿಕೂಟವು ಸಭೆ ಮೇಲೆ ಸಭೆ ನಡೆಸುತ್ತಿದೆ.
ಇದ್ರ ನಡುವೆ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಮಹತ್ವದ ಹೇಳಿಕೆ ನೀಡಿದ್ದು, ಮುಂದಿನ ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ತಿಳಿಸಿದ್ದಾರೆ. .
ತಮ್ಮ ಪಕ್ಷ ಇಂಡಿಯಾ ಮೈತ್ರಿಕೂಟಕ್ಕೆ ಸೇರುವುದಿಲ್ಲ. ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುವುದು ಬಿಎಸ್ಪಿಗೆ ಅನಾನುಕೂಲವಾಗಿದೆ. ಮೇಲ್ವರ್ಗದ ಮತಗಳು ಬಿಎಸ್ಪಿಗೆ ವರ್ಗಾವಣೆಯಾಗುವುದಿಲ್ಲ. ದಲಿತ ಮತಗಳು ವರ್ಗಾವಣೆಯಾಗುತ್ತವೆ ಎಂದರು.
ಇಂಡಿಯಾ ಮೈತ್ರಿಕೂಟಕ್ಕೆ ಸೇರಿದರೆ ಲಾಭ ಕಡಿಮೆ ನಷ್ಟವೇ ಹೆಚ್ಚು. ನಮ್ಮ ಮತಗಳ ಶೇಕಡಾವಾರು ಪ್ರಮಾಣ ಕಡಿಮೆಯಾಗಿ ಇತರೆ ಪಕ್ಷಗಳಿಗೆ ಲಾಭವಾಗುತ್ತದೆ. ನಮ್ಮ ಪಕ್ಷ ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ಮೂಲಕ ಉತ್ತಮ ಫಲಿತಾಂಶ ತರಲಿದೆ.ಚುನಾವಣೆ ಮುಗಿದ ಬಳಿಕ ಮೈತ್ರಿ ಬಗ್ಗೆ ಆಲೋಚನೆ ಮಾಡುತ್ತೇವೆ ಎಂದು ಮಾಯಾವತಿ ಹೇಳಿದ್ದಾರೆ.