ಕರ್ನಾಟಕ ಬಂದ್:‌ ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿರುವ ನಮ್ಮ ಮೆಟ್ರೋ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬೆಂಗಳೂರಿನಲ್ಲಿ ಕಾವೇರಿ ಹೋರಾಟದ ಬಿಸಿ ಜೋರಾಗಿದೆ. ಈಗಾಗಲೇ ನಗರದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬಂದ್‌ ಹಿನ್ನೆಲೆ ಹಲವು ಖಾಸಗಿ ಕಂಪನಿಗಳು ವರ್ಕ್‌ ಫ್ರಮ್‌ ಹೋಂಗೆ ಅವಕಾಶ ಕೊಟ್ಟಿದ್ದು, ಜನರಿಲ್ಲದೆ ನಮ್ಮ ಮೆಟ್ರೋ ಬಿಕೋ ಎನ್ನುತ್ತಿವೆ.

ಕಾವೇರಿ ನದಿ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ವಿವಿಧ ಸಂಘಟನೆಗಳು ಕರೆ ನೀಡಿರುವ ಬಂದ್‌ನಿಂದಾಗಿ ಬೆಂಗಳೂರಿನ ವಿಜಯನಗರ ಮೆಟ್ರೋ ನಿಲ್ದಾಣದಲ್ಲಿ ಕಡಿಮೆ ಸಂಖ್ಯೆಯ ಪ್ರಯಾಣಿಕರು ಕಂಡುಬಂದರು. ಮೆಟ್ರೋದಲ್ಲಿ ಕೂಡ ಬೆರಳೆಣಿಕೆಯ ಪ್ರಯಾಣಿಕರು ಸಂಚರಿಸುತ್ತಿರುವುದು ಕಂಡು ಬಂತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!