ಸಿದ್ದರಾಮಯ್ಯ ಯಾರ ಮುಲಾಜಿಗೂ ಒಳಗಾಗದೆ ಜಾತಿ ಗಣತಿ ವರದಿಯನ್ನು ಬಿಡುಗಡೆ ಮಾಡಲಿ: ಹೆಚ್.ವಿಶ್ವನಾಥ್

ಹೊಸದಿಗಂತ ವರದಿ, ಮೈಸೂರು;

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾರ ಮುಲಾಜಿಗೂ ಒಳಗಾಗದೆ ಜಾತಿ ಗಣತಿ ವರದಿಯನ್ನು ಬಿಡುಗಡೆ ಮಾಡಲಿ ಎಂದು ವಿಧಾನ ಪರಿಷತ್ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ ಆಗ್ರಹಿಸಿದರು.

ಸೋಮವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ವರದಿ ಬಿಡುಗಡೆಗೆ ವೀರಶೈವ ಲಿಂಗಾಯತ ಸಮುದಾಯ ಏಕೆ ವಿರೋಧ ಮಾಡುತ್ತಿದೆ ಗೊತ್ತಾಗುತ್ತಿಲ್ಲ. ಮೊದಲು ವರದಿಯನ್ನು ಬಿಡುಗಡೆ ಆಗಲಿ. ಅಲ್ಲಿ ಏನಿದೆ ಅಂತ ಚರ್ಚೆ ಆಗಲಿ. ವರದಿ ನೋಡದೇ, ತಿಳಿಯದೇ ಸುಮ್ಮನೇ ಆರಂಭದಲ್ಲೇ ವಿರೋಧ ಮಾಡುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಇದೇ ರೀತಿ ಅಂದು ಹಾವನೂರು ಆಯೋಗದ ವರದಿಯನ್ನು ಕೂಡ ಸಾಕಷ್ಟು ಜನರು ವಿರೋಧ ಮಾಡಿದರು. ಆದರೆ ಅಂದಿನ ಸಿಎಂ ದೇವರಾಜ ಅರಸು ಎಲ್ಲರ ವಿರೋಧದ ನಡುವೆಯೇ ಹಾವನೂರು ವರದಿ ಬಿಡುಗಡೆ ಮಾಡಿದರು. ಈಗಲೂ ಸಿಎಂ ಸಿದ್ದರಾಮಯ್ಯನವರು ಜಾತಿ ಗಣತಿ ವರದಿಯನ್ನು ಬಿಡುಗಡೆ ಮಾಡಬೇಕು. ಯಾರ ಮುಲಾಜಿಗೂ ಒಳಗಾಗಬಾರದು. ವರದಿ ಬಂದ ಬಳಿಕ ಅದರಲ್ಲಿ ಏನು ಇದೆ, ಏನಿಲ್ಲ ಅನ್ನೋದನ್ನ ಚರ್ಚೆ ಮಾಡಲಿ. ಸುಮ್ಮನೇ ಇಲ್ಲ ಸಲ್ಲದ ಆರೋಪ ಮಾಡುವುದು ಸರಿಯಲ್ಲ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!