ಭ್ರೂಣ ಹಂತಕರಿಗೆ ಗಲ್ಲು ಸಿಗಲಿ, ಹತ್ಯೆ ತನಿಖೆ ಎಸ್‌ಐಟಿಗೆ ವಹಿಸಿ: ಆರ್.ಅಶೋಕ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ಜನತೆಯನ್ನು ಬೆಚ್ಚಿ ಬೀಳಿಸಿದ ಭ್ರೂಣ ಹತ್ಯೆ ಪ್ರಕರಣದ ಹಿಂದೆ ಯಾವುದೇ ಪ್ರಭಾವಿಗಳಿದ್ದರೂ ಗಣನೆಗೆ ಪಡೆಯದೆ ಆರೋಪಿಗಳಿಗೆ ಗಲ್ಲು ಶಿಕ್ಷೆ ಕೊಡಿಸಬೇಕು ತನಿಖೆ ಎಸ್‌ಐಟಿಗೆ ನೀಡಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಸದನದಲ್ಲಿ ಗುಡುಗಿದ್ದಾರೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ವೇಳೆ ವಿಷಯ ಪ್ರಸ್ತಾಪಿಸಿದ ಅವರು, ಈ ಕೃತ್ಯದಲ್ಲಿ ವೈದ್ಯರೂ ಸೇರಿರುವುದು ಆಘಾತ ಮೂಡಿಸುತ್ತದೆ. ಇದು ನಾಚಿಗೇಡಿನ ಕೆಲಸ. ಇದರ ಹಿಂದೆ ಕಾಣದ ಕೈಗಳು ಕೆಲಸ ಮಾಡುತ್ತಿವೆ. ಮೊದಲು ಕುಟುಂಬದಲ್ಲೇ ಮಹಿಳೆಗೆ ಟಾರ್ಚರ್ ನೀಡಲಾಗುತ್ತದೆ. ಬಳಿಕ ಏಜೆಂಟ್ ಹುಡುಕಿ ಸ್ಕ್ಯಾನಿಂಗ್ ಮಾಡಲಾಗುತ್ತದೆ. ಇದೊಂದು ರೀತಿಯಲ್ಲಿ ಗಂಡು ಮಗು ಬೇಕು ಎಂಬ ಕಾರಣಕ್ಕೆ ನಡೆಯುತ್ತಿರುವ ಕೊಲೆ. ಎಂದು ಅವರು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಪ್ರಕರಣದ ಮೇಲೆ ರಾಜ್ಯ ಸರ್ಕಾರ ನಿಗಾ ಇರಿಸಲಿದೆ. ಜೊತಗೆ ಕಾರ್ಯಪಡೆ ಮತ್ತು ಮೇಲ್ವಿಚಾರಣಾ ಸಮಿತಿ ನೇಮಿಸಲಾಗುತ್ತದೆ ಎಂದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!