ಮನೆಮನೆಯಲ್ಲಿ ಹಾರಲಿ ತಿರಂಗ: ದೇಶದ ಜನತೆಗೆ ಪ್ರಧಾನಿ ಮೋದಿ ಕರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಆಗಸ್ಟ್ 13 ರಿಂದ 15 ರವರೆಗೆ ಪ್ರತೀ ಮನೆಗಳಲ್ಲಿ‌ ರಾಷ್ಟ್ರಧ್ವಜ ಹಾರಿಸುವ ಮೂಲಕ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ದೇಶದಲ್ಲಿ ಧ್ವಜದೊಂದಿಗಿನ ಬಾಂಧವ್ಯವನ್ನು ಇನ್ನಷ್ಟು ಗಟ್ಟಿಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಜನತೆಗೆ ಕರೆ ನೀಡಿದ್ದಾರೆ.
ನಾವು ಆಜಾದಿ ಕಾ ಅಮೃತ್ ಮಹೋತ್ಸವ ಸಂಭ್ರಮದಲ್ಲಿದ್ದೇವೆ. “ನಾವು ಹರ್ ಘರ್ ತಿರಂಗ” ಚಳುವಳಿ ಬಲಪಡಿಸೋಣ. ತ್ರಿವರ್ಣ ಧ್ವಜವನ್ನು ಹಾರಿಸೋಣ ಅಥವಾ ಮನೆಗಳಲ್ಲಿ ಆ.13, 15 ರ ನಡುವೆ ಪ್ರದರ್ಶಿಸೋಣ. ಈ ಆಂದೋಲನ ರಾಷ್ಟ್ರಧ್ವಜದೊಂದಿಗೆ ನಮ್ಮ ಸಂಬಂಧವನ್ನು ಇನ್ನಷ್ಟು ಗಟ್ಟಿಗೊಳಿಸುತ್ತದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಹರ್ ಘರ್ ತಿರಂಗಾ ಅಭಿಯಾನಕ್ಕೆ‌ ಸಿದ್ಧತೆ ನಡೆಸಿರುವ ಕೇಂದ್ರ ಸರ್ಕಾರ, ದೇಶಾದ್ಯಂತ 20 ಕೋಟಿ ಮನೆಗಳ ಮೇಲೆ ಧ್ವಜ ರಾರಾಜಿಸುವಂತೆ ಮಾಡಲು ಸಿದ್ಧತೆ ನಡೆಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!