ಹೊಸದಿಗಂತ ವರದಿ,ಮಡಿಕೇರಿ:
ಕೊಡಗು ಜಿಲ್ಲಾಡಳಿತ ಹೇರಿರುವ ನಿಷೇಧಾಜ್ಞೆಯ ಹಿನ್ನೆಲೆಯಲ್ಲಿ ಆ.26 ರಂದು ಕೈಗೊಳ್ಳಬೇಕಿದ್ದ ‘ಮಡಿಕೇರಿ ಚಲೋ’ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ನಿಷೇಧಾಜ್ಞೆ ತೆರವಾದ ಬಳಿಕ ಮುಂದಿನ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.
ಮಂಗಳವಾರ ನಗರದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ಕಾರಣವಿಲ್ಲದೆ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿರುವುದು ಅಸಂವಿಧಾನಾತ್ಮಕ ಎಂದು ಟೀಕಿಸಿದರು.
ಸಿದ್ದರಾಮಯ್ಯ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಮೊಟ್ಟೆ ಹೊಡೆಯುವ ಕೃತ್ಯ ನಡೆಯಲು ಅವಕಾಶ ಮಾಡಿಕೊಟ್ಟು ತಪ್ಪು ಮಾಡಿದ ಜಿಲ್ಲಾಡಳಿತ ಈಗ ನಿಷೇಧಾಜ್ಞೆ ತರುವ ಮೂಲಕ ಮತ್ತೊಮ್ಮೆ ತಪ್ಪೆಸಗಿದೆ ಎಂದೂ ಟೀಕಿಸಿದರು.