ಫೈನಲ್ ಬಗ್ಗೆ ಆಮೇಲೆ ಯೋಚಿಸೋಣ, ಮೊದಲು ವಿಶ್ರಾಂತಿ ಅಗತ್ಯವಿದೆ: ರೋಹಿತ್ ಶರ್ಮಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಾಂಪಿಯನ್ಸ್ ಟ್ರೋಫಿಯ ನಿರ್ಣಾಯಕ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಮಣಿಸಿ ಭಾರತ ಫೈನಲ್​ಗೆ ಪ್ರವೇಶಿಸಿದೆ. ಆಸ್ಟ್ರೇಲಿಯಾ ತಂಡವು 49.3 ಓವರ್​ಗಳಲ್ಲಿ 264 ರನ್​ಗಳಿಸಿ ಆಲೌಟ್ ಆಗಿತ್ತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ 84 ರನ್ ಬಾರಿಸಿದ್ದರು. ಈ ಅರ್ಧಶತಕದ ನೆರವಿನಿಂದ ಭಾರತ ತಂಡವು 4 ವಿಕೆಟ್​ಗಳ ಗೆಲುವು ದಾಖಲಿಸಿದೆ.

ಇನ್ನು ತಂಡವನ್ನು ಗೆಲುವಿನತ್ತ ಕೊಂಡೊಯ್ಯುವಲ್ಲಿ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ನಡುವಣ ಜೊತೆಯಾಟ ಮುಖ್ಯವಾಗಿತ್ತು. ಇದರ ನಡುವೆ ಹಾರ್ದಿಕ್ ಪಾಂಡ್ಯ ಅವರ ಬಿರುಸಿನ ಬ್ಯಾಟಿಂಗ್ ಬಹಳ ನಿರ್ಣಾಯಕವಾಗಿದ್ದವು.

ಇನ್ನು ಫೈನಲ್​ನಲ್ಲಿ ಯಾರನ್ನು ಎದುರಿಸುತ್ತೀರಿ ಎಂಬ ಪ್ರಶ್ನೆಗೆ, ನಾವು ಅದರ ಬಗ್ಗೆ ಹೆಚ್ಚು ಯೋಚಿಸುವುದಿಲ್ಲ. ಎರಡೂ ತಂಡಗಳು ಉತ್ತಮ ತಂಡಗಳು. ಅದಕ್ಕಾಗಿಯೇ ಅವರು ಸೆಮಿಸ್‌ನಲ್ಲಿದ್ದಾರೆ. ನಾವು ಅವರ ಮೇಲೆ ಕಣ್ಣಿಡುತ್ತೇವೆ. ಇದಾಗ್ಯೂ ನಮ್ಮ ಆಟಗಾರರಿಗೆ ವಿಶ್ರಾಂತಿಯ ಅಗತ್ಯವಿದೆ ಎಂದು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!