ಹೊಸದಿಗಂತ ಡಿಜಿಟಲ್ ಡೆಸ್ಕ್:
ಇನ್ಫೋಸಿಸ್ 400 ಮಂದಿ ಟ್ರೈನಿ ಉದ್ಯೋಗಿಗಳನ್ನು ಕೆಲಸದಿಂದ ತೆಗೆದ ವಿಚಾರ ಐಡಿಡಗ ದೊಡ್ಡ ಸಮಸ್ಯೆಯನ್ನು ಉಂಟುಮಾಡಿದೆ.
ಅಮಾನತುಗೊಂಡಿರುವ ಉದ್ಯೋಗಿಗಳು ನೇರವಾಗಿ ಪ್ರಧಾನಿ ಕಾರ್ಯಾಲಯಕ್ಕೆ ದೂರು ನೀಡಿದ್ದಾರೆ. ಇದರ ಪರಿಣಾಮ ಇದೀಗ ಕೇಂದ್ರ ಸರ್ಕಾರ ಇನ್ಫೋಸಿಸ್ಗೆ 2ನೇ ನೋಟಿಸ್ ನೀಡಿದೆ.
ಪ್ರಧಾನಿ ಕಾರ್ಯಾಲಯದಲ್ಲಿ ಅಮಾತು ಉದ್ಯೋಗಿಗಳು ದೂರು ನೀಡಿರುವ ಹಿನ್ನಲೆಯಲ್ಲಿ ಪ್ರಕರಣ ಗಂಭೀರವಾಗುತ್ತಿದೆ. ಪ್ರಧಾನಿ ಕಾರ್ಯಾಲಯ ಈ ಪ್ರಕರಣವನ್ನು ಪರಿಶೀಲಿಸುವಂತೆ ಕೇಂದ್ರ ಕಾರ್ಮಿಕ ಆಯೋಗಕ್ಕೆ ಸೂಚಿಸಿದೆ. ಇದರಂತೆ ಕೇಂದ್ರ ಕಾರ್ಮಿಕ ಆಯೋಗ, ಕರ್ನಾಟಕ ಕಾರ್ಮಿಕ ಆಯೋಗಕ್ಕೆ ಈ ಪ್ರಕರಣದಲ್ಲಿ ತಕ್ಷಣವೇ ಮಧ್ಯಪ್ರವೇಶಿಸಿ ಸತ್ಯಾಸತ್ಯತೆ ಪರಿಶೀಲಿಸುವಂತೆ ಸೂಚಿಸಿದೆ.
ಇನ್ಫೋಸಿಸ್ ಉದ್ಯೋದಿಗಳ ಅಮಾನತು ಕುರಿತು ಪ್ರಧಾನಿ ಕಾರ್ಯಾಲಯ ಹಲವು ದೂರುಗಳನ್ನು ಸ್ವೀಕರಿಸಿದೆ. ದೂರಿನಲ್ಲಿ ಅಮಾತುಗೊಂಡಿರುವ ಉದ್ಯೋಗಿಗಳು ಕೆಲ ಬೇಡಿಕೆ ಮುಂದಿಟ್ಟಿದ್ದಾರೆ. ಈ ಪ್ರಕರಣದಲ್ಲಿ ಕಾರ್ಮಿಕ ಸಚಿವಾಲಯ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿದ್ದಾರೆ. ಅಮಾನತು ಗೊಂಡಿರುವ ಉದ್ಯೋಗಿಗಳನ್ನು ಮರು ನೇಮಕ ಮಾಡುವಂತೆ ಆಗ್ರಹಿಸಿದ್ದಾರೆ. ಜೊತೆಗೆ ಮುಂದಿನ ದಿನಗಳಲ್ಲಿ ಇಂತಹ ಅಮಾನತುಗಳಿಂದ ಉದ್ಯೋಗಿಗಳನ್ನು ಪಾರು ಮಾಡುವಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಇದೀಗ ಫೆಬ್ರವರಿ 25 ರಂದು ಕೇಂದ್ರ ಕಾರ್ಮಿಕ ಸಚಿವಾಲಯ ಈ ಕುರಿತು ಪತ್ರ ಹೊರಡಿಸಿದೆ. ಈ ಪತ್ರದಲ್ಲಿ ರಾಜ್ಯ ಸರ್ಕಾರದ ಸೂಕ್ತ ಸಚಿವಾಲಯ ಈ ಪ್ರಕರಣ ಕುರಿತು ತಕ್ಷಣವೇ ಗಮನಹರಿಸಬೇಕು. ಎರಡೂ ತಂಡಗಳ ವಾದ ಆಲಿಸಿ, ಪರಾಮರ್ಶಿಸಲು ಸೂಚಿಸಿದೆ. 117 ಅಭ್ಯರ್ಥಿಗಳು ಈ ಪ್ರಕರಣ ಕುರಿತು ದೂರು ನೀಡಿದ್ದಾರೆ.
ಈ ತಿಂಗಳ ಆರಂಭದಲ್ಲಿ ಇನ್ಫೋಸಿಸ್ ಮೈಸೂರು ಕ್ಯಾಂಪಸ್ನಲ್ಲಿ ಸಾಮೂಹಿತ ಅಮಾನತು ನಡೆದಿತ್ತು. ಸುಮಾರು 300ಕ್ಕೂ ಹೆಚ್ಚು ಅಭ್ಯರ್ಥಿಗಳನ್ನು ಅಮಾನತು ಮಾಡಿತ್ತು. ಇನ್ಫೋಸಿಸ್ ಕಂಪನಿ ಪ್ರಕಾರ, ಅಭ್ಯರ್ಥಿಗಳಿಗೆ ಅರ್ಹತಾ ಪರೀಕ್ಷೆ ಪಾಸ್ ಆಗಲು ಮೂರು ಅವಕಾಶ ನೀಡಲಾಗಿತ್ತು. ಆದರೆ ಮೂರರಲ್ಲೂ ಅಭ್ಯರ್ಥಿಗಳು ವಿಫಲರಾಗಿದ್ದಾರೆ. ಹೀಗಾಗಿ ಕಂಪನಿ ನಿಯಮದ ಪ್ರಕಾರ ಅಭ್ಯರ್ಥಿಗಳ ಕೆಲಸದಲ್ಲಿ ಮುಂದುವರಿಯಲು ಸಾಧ್ಯವಾಗುವುದಿಲ್ಲ ಎಂದಿದೆ.