ಅಮರನಾಥ ಯಾತ್ರಾ ಮೂಲ ಶಿಬಿರಕ್ಕೆ ಎಲ್‌ಜಿ ಮನೋಜ್ ಸಿನ್ಹಾ ಭೇಟಿ, ವ್ಯವಸ್ಥೆಗಳ ಪರಿಶೀಲನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಗುರುವಾರ ಜಮ್ಮುವಿನಲ್ಲಿರುವ ಶ್ರೀ ಅಮರನಾಥ ಯಾತ್ರೆಯ ಮೂಲ ಶಿಬಿರಕ್ಕೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ವ್ಯವಸ್ಥೆಗಳನ್ನು ಪರಿಶೀಲಿಸಿದರು.

ಅಮರನಾಥ ಯಾತ್ರಿಗಳಿಗೆ ಉತ್ತಮ ಆರೋಗ್ಯ ಸೌಲಭ್ಯಗಳನ್ನು ಖಚಿತಪಡಿಸಿಕೊಳ್ಳಲು, LG ಮನೋಜ್ ಸಿನ್ಹಾ ಅವರು ಪಹಲ್ಗಾಮ್‌ನ ನುನ್ವಾನ್ ಮೂಲ ಶಿಬಿರದಲ್ಲಿ ವೈದ್ಯರ ತಂಡದೊಂದಿಗೆ ಸಂವಾದ ನಡೆಸಿದರು.

ಪರಿಸರ ಸಂರಕ್ಷಣೆಗಾಗಿ ಯಾತ್ರೆಯ ಎರಡೂ ಮಾರ್ಗಗಳಲ್ಲಿ ತ್ಯಾಜ್ಯ ನಿರ್ವಹಣಾ ಘಟಕಗಳನ್ನು ಇರಿಸಲಾಗಿದೆ. ಜೂನ್ 28 ರಂದು ಬೆಳಿಗ್ಗೆ 4 ಗಂಟೆಗೆ ಯಾತ್ರೆಗೆ ಚಾಲನೆ ನೀಡಲಾಗುವುದು. ಅಮರನಾಥ ಯಾತ್ರೆಗೆ ಸಮಗ್ರ ಭದ್ರತಾ ಯೋಜನೆ ರೂಪಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಡಿಜಿಪಿ ಆರ್.ಆರ್.ಸ್ವೈನ್ ಅವರು ಹೇಳಿದ್ದಾರೆ.

ಮುಂಬರುವ ಅಮರನಾಥ ಯಾತ್ರೆಯನ್ನು ಸುಗಮವಾಗಿ ನಡೆಸಲು ಮತ್ತು ಯಾತ್ರೆಯ ಮಾರ್ಗದಲ್ಲಿ ಯಾವುದೇ ತುರ್ತು ಪರಿಸ್ಥಿತಿಗಳಿಗೆ ಸ್ಪಂದಿಸಲು ಜಮ್ಮು ಮತ್ತು ಕಾಶ್ಮೀರ ರಾಜ್ಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿಯನ್ನು ಸುಧಾರಿತ ಸಾಧನಗಳೊಂದಿಗೆ ಸಜ್ಜುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!