ಹೊಸದಿಗಂತ ಡಿಜಿಟಲ್ ಡೆಸ್ಕ್:
ಜೀವ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಶಸ್ತ್ರಾಸ್ತ್ರ ಪರವಾನಿಗೆ ನೀಡಲಾಗಿದೆ.
ನಟ ಸಲ್ಲಿಸಿರುವ ಸ್ವಯಂ ರಕ್ಷಣೆಗಾಗಿನ ಅರ್ಜಿ ಮಾನ್ಯಗೊಳಿಸಿ ಶಸ್ತ್ರಾಸ್ತ್ರ ಪರವಾನಿಗೆ ನೀಡಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
ಗಾಯಕ ಸಿಧು ಮೂಸ್ ವಾಲಾ ಅವರನ್ನು ಗುಂಡಿಕ್ಕಿ ಕೊಂದ ಕೆಲವೇ ದಿನಗಳ ಅಂತರದಲ್ಲಿ ಸಲ್ಮಾನ್ ಹಾಗೂ ಅವರ ತಂದೆಗೆ ಕೊಲೆ ಬೆದರಿಕೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಆತ್ಮ ರಕ್ಷಣೆಗಾಗಿ ಸಲ್ಮಾನ್ ಖಾನ್ ಅವರು ಗನ್ ಪರವಾನಿಗೆಗಾಗಿ ಅರ್ಜಿ ಸಲ್ಲಿಸಿದ್ದರು.