ಆಂಧ್ರ ಡಿಸಿಎಂ ಪವನ್​ ಕಲ್ಯಾಣ್​​ ಗೆ ಜೀವ ಬೆದರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಂಧ್ರಪ್ರದೇಶದ ಡಿಸಿಎಂ ಪವನ್​ ಕಲ್ಯಾಣ್​​ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ .
ಪವನ್ ಕಲ್ಯಾಣ್ ಅವರ ಕಚೇರಿ ಸಿಬ್ಬಂದಿಗೆ ಕಿಡಿಗೇಡಿಗಳು ಬೆದರಿಕೆ ಕರೆ ಮಾಡಿದ್ದಾರೆ.

ಆಕ್ಷೇಪಾರ್ಹ ಭಾಷೆಯಲ್ಲಿ ಎಚ್ಚರಿಕೆ ಸಂದೇಶಗಳನ್ನು ಕಳುಹಿಸಲಾಗಿದೆ. ಅಷ್ಟೇ ಅಲ್ಲ ಪವನ್​ ಕಲ್ಯಾಣ್​ ಅವರನ್ನು ಸಾಯಿಸುತ್ತೇವೆ ಎಂದು ವಾರ್ನಿಂಗ್​ ಕೊಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಡಿಸಿಎಂ ಪವನ್ ಕಲ್ಯಾಣ್ ಅವರ ಸೆಲ್ ಎಪಿ ಸೆಕ್ರೆಟರಿಯೇಟ್‌ 2ನೇ ಬ್ಲಾಕ್‌ನಲ್ಲಿದೆ. ಪವನ್ ಕಲ್ಯಾಣ್ ಅವರನ್ನು ಕೊಲ್ಲುತ್ತೇವೆ, ಅವರ ಪಕ್ಕದಲ್ಲೇ ಇದ್ದೇವೆ ಎಂದು ಬೆದರಿಕೆ ಕರೆಗಳು ಬಂದಿವೆ. ಜತೆಗೆ ಪವನ್‌ ಅವರಿಗೆ ಅಸಭ್ಯ ಭಾಷೆಯಲ್ಲಿ ನಿಂದಿಸಲಾಗಿದೆ. ಈ ಕೂಡಲೇ ಆತಂಕಕ್ಕೆ ಒಳಗಾದ ಕಚೇರಿ ಸಿಬ್ಬಂದಿ ವಿಷಯವನ್ನು ಪವನ್ ಕಲ್ಯಾಣ್ ಗಮನಕ್ಕೆ ತಂದಿದ್ದಾರೆ.

ಇನ್ನು, ಉನ್ನತ ಪೊಲೀಸ್ ಅಧಿಕಾರಿಗಳು ಬೆದರಿಕೆ ಹಾಕಿದ್ಯಾರು? ಎಂದು ತನಿಖೆ ನಡೆಸುತ್ತಿದ್ದಾರೆ. ಬೆದರಿಕೆ ಕರೆಗಳು ಮತ್ತು ಸಂದೇಶಗಳು ಎಲ್ಲಿಂದ ಬಂದವು ಎಂದು ವಿಚಾರಣೆ ಮಾಡುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!