ಶರದ್ ಪವಾರ್ ಗೆ ಜೀವ ಬೆದರಿಕೆ: ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ‘ಮಹಾ’ ಸರಕಾರ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಎನ್ ಸಿಪಿ ವರಿಷ್ಠ ಶರದ್ ಪವಾರ್ ಅವರಿಗೆ ಜೀವ ಬೆದರಿಕೆ ಹಾಕಿರುವ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಶುಕ್ರವಾರ ಹೇಳಿದ್ದಾರೆ.

ಈ ಸಂಬಂಧ ನಾನು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ವೈಯಕ್ತಿಕವಾಗಿ ಮಾತನಾಡಿ, ಸೂಕ್ತ ತನಿಖೆಗೆ ಸೂಚನೆ ನೀಡಿದ್ದೇನೆ ಎಂದು ಶಿಂಧೆ ತಿಳಿಸಿದ್ದಾರೆ.

ಶರದ್ ಪವಾರ್ ಅವರು ಒಬ್ಬ ಹಿರಿಯ ನಾಯಕ ಮತ್ತು ನಾವೆಲ್ಲರೂ ಅವರನ್ನು ಗೌರವಿಸುತ್ತೇವೆ. ಅವರ ಸುರಕ್ಷತೆ ಬಗ್ಗೆ ಸಂಪೂರ್ಣ ಕಾಳಜಿ ವಹಿಸಲಾಗಿದೆ. ಅಗತ್ಯವಿದ್ದಲ್ಲಿ ಅವರ ಭದ್ರತೆಯನ್ನು ಹೆಚ್ಚಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಮಹಾ ಸಿಎಂ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!