ಹೊಸದಿಗಂತ ಡಿಜಿಟಲ್ ಡೆಸ್ಕ್:
ಎನ್ ಕೌಂಟರ್ ಮಾಡುವುದಾಗಿ ಜೀವ ಬೆದರಿಕೆ ಪತ್ರ ಬಂದಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನನ್ನನ್ನು ಎನ್ ಕೌಂಟರ್ ಮಾಡುವುದಾಗಿ ಬೆದರಿಕೆ ಪತ್ರ ಬರೆದು ಕಚೇರಿಗೆ ಕಳುಹಿಸಿದ್ದು, ನನ್ನ ಕುಟುಂಬದವರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದು, ಜಾತಿ ಹೆಸರುಗಳಿಂದ ನಿಂದಿಸಿದ್ದಾರೆ ಎಂದಿದ್ದಾರೆ.
ಬೆಂಗಳೂರಿನ ವಿಕಾಸಸುಧಾ ಕಚೇರಿಗೆ ಪತ್ರ ಬಂದಿತ್ತು. ಈ ಕುರಿತು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನನ್ನ ಹೆಣ ಬೀಳಿಸಿಯಾದರು ಚುನಾವಣೆಯಲ್ಲಿ ಗೆಲ್ಲಬೇಕು ಅನ್ನೋ ಸಂಚು ನಡೆಯುತ್ತಿದೆ ಎಂದು ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.