ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿಜಾಬ್ ಕುರಿತು ಮಹತ್ವದ ತೀರ್ಪು ಪ್ರಕಟಿಸಿದ್ದ ನ್ಯಾಯಾಮೂರ್ತಿಗಳಿಗೆ ಜೀವ ಬೆದರಿಕೆ ಹಾಕಲಾಗಿದ್ದು, ಹೀಗಾಗಿ ವೈ ಕೆಟಗರಿಯ ಭದ್ರತೆಯನ್ನು ಕೊಡಬೇಕು ಎನ್ನುವ ತೀರ್ಮಾನವನ್ನು ರಾಜ್ಯ ಸರ್ಕಾರ ಮಾಡಿದೆ.
ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿಗಳಾದ ನ್ಯಾಯಮೂರ್ತಿಗಳಾದ ಕೃಷ್ಣ ಎಸ್ ದೀಕ್ಷಿತ್ ಹಾಗೂ ಜೆ.ಎಂ ಖಾಜಿ ಅವರಿಗೆ ಕೊಲೆ ಬೆದರಿಕೆ ಹಾಕಿದ್ದು, ಈ ಹಿನ್ನೆಲೆಯಲ್ಲಿ ನ್ಯಾಯಮೂರ್ತಿಗಳಿಗೆ ರಾಜ್ಯ ಸರ್ಕಾರ ವೈ ಶ್ರೇಣಿ ಭದ್ರತೆ ಒದಗಿಸಿದೆ.
ತಮಿಳುನಾಡಿನ ಮಧುರೈ ಮೂಲದ ವ್ಯಕ್ತಿಯೊಬ್ಬರು ಕೊಲೆ ಬೆದರಿಕೆ ಹಾಕಿದ್ದು, ವಕೀಲರಾದ ಸುಧಾ ಕಟ್ವಾ ದೂರು ನೀಡಿದ್ದಾರೆ. ಈ ದೂರು ಆಧರಿಸಿ ಬೆಂಗಳೂರಿನ ವಿಧಾನಸೌಧ ಠಾಣೆ ಪೊಲೀಸರು ಶನಿವಾರ ಎಫ್ಐಆರ್ ದಾಖಲಿಸಿದ್ದರು. ಸಿಜೆ ಸೇರಿದಂತೆ ಮೂವರು ನ್ಯಾಯಮೂರ್ತಿಗಳಿಗೆ ವೈ ಭದ್ರತೆ ಒದಗಿಸಲಾಗಿದೆ.