ಹೊಸದಿಗಂತ ಡಿಜಿಟಲ್ ಡೆಸ್ಕ್
ಉತ್ತರ ಪ್ರದೇಶದಲ್ಲಿ ಬುಧವಾರ ನಡೆದ ಪ್ರತ್ಯೇಕ ಘಟನೆಗಳಲ್ಲಿ ಸಿಡಿಲು ಬಡಿದು14 ಮಂದಿ ಸಾವನ್ನಪ್ಪಿದ್ದು, 16 ಮಂದಿ ಗಾಯಗೊಂಡಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೃತರ ಕುಟುಂಬಗಳಿಗೆ ತಲಾ ₹ 4 ಲಕ್ಷ ಆರ್ಥಿಕ ನೆರವು ಘೋಷಿಸಿದ್ದಾರೆ.
ಪರಿಹಾರ ಆಯುಕ್ತರ ಕಛೇರಿ ನೀಡಿದ ವಿವರಗಳ ಪ್ರಕಾರ, ಸಿಡಿಲಿಗೆ ಬಂದಾ 4 ಸಾವು, ಫತೇಪುರ್ನಲ್ಲಿ ಇಬ್ಬರು ಮತ್ತು ಬಲರಾಂಪುರ, ಚಂದೌಲಿ, ಬುಲಂದ್ಶಹರ್, ರಾಯ್ ಬರೇಲಿ, ಅಮೇಥಿ, ಕೌಶಂಬಿ, ಸುಲ್ತಾನ್ಪುರ ಮತ್ತು ಚಿತ್ರಕೂಟ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.
ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಒದಗಿಸುವಂತೆ ಮುಖ್ಯಮಂತ್ರಿ ಯೋಗಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ