ಹೊಸದಿಗಂತ ಡಿಜಿಟಲ್ ಡೆಸ್ಕ್:
ಭೀಕರ ಮಳೆಗೆ ತಮಿಳುನಾಡಿನಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಆದ್ರೆ ಸಿಎಂ ಎಂಕೆ ಸ್ಟಾಲಿನ್ ಅವರು ದೆಹಲಿಯಲ್ಲಿ ನಡೆಯುವ ಇಂಡಿಯಾ ಬಣದ ಸಭೆಯಲ್ಲಿ ಭಾಗವಹಿಸಿದ್ದಾರೆ .
ಈ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ , ರೋಮ್ ಹತ್ತಿ ಹುರಿಯುತ್ತಿರುವಾಗ ನಿರೋ ಪಿಟೀಲು ನುಡಿಸುತ್ತಿದ್ದನಂತೆ ಎಂದು ವ್ಯಂಗ್ಯವಾಡಿದ್ದಾರೆ.
ತಮಿಳುನಾಡಿನ ದಕ್ಷಿಣ ಜಿಲ್ಲೆಗಳಲ್ಲಿ ಪ್ರವಾಹದಿಂದ ಸಂತ್ರಸ್ತರಾದ ಜನರಿಗೆ ಪರಿಹಾರವನ್ನು ಒದಗಿಸಲು ಸ್ಥಳದಲ್ಲೇ ನಿಗಾ ವಹಿಸುವ ಬದಲು ಸಿಎಂ ಸ್ಟಾಲಿನ್ ಇಂಡಿಯಾ ಒಕ್ಕೂಟದ ಸಭೆಗೆ ಹಾಜರಾಗಲು ಮುಂದಾಗಿದ್ದಾರೆ. ಇದು ರೋಮ್ ಸುಟ್ಟುಹೋದಾಗ ನೀರೋ ಪಿಟೀಲು ನುಡಿಸಿದರು ಎಂಬ ಪ್ರಸಿದ್ಧ ಮಾತು ಎಂಕೆ ಸ್ಟಾಲಿನ್ ಅವರ ನಡೆಗೆ ಸೂಕ್ತವಾಗಿದೆ ಎಂದು ಅಣ್ಣಾಮಲೈ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಸ್ಟಾಲಿನ್ ದೆಹಲಿಗೆ ಹೋಗಬೇಕಾಗಿರುವ ತನ್ನ ನೈಜ ಕಾರ್ಯಸೂಚಿಯಿಂದ ಜನರ ಗಮನವನ್ನು ಬೇರೆಡೆಗೆ ತಿರುಗಿಸಲು ಪ್ರಧಾನಿಗೆ ಅಪಾಯಿಂಟ್ಮೆಂಟ್ ಕೇಳಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಸ್ಟಾಲಿನ್ ದೆಹಲಿಯಲ್ಲಿರುವುದರಿಂದ ನಮ್ಮ ಗೌರವಾನ್ವಿತ ಪ್ರಧಾನಿಯವರೊಂದಿಗೆ ಭೇಟಿ ಅವಕಾಶ ಪಡೆಯಲು ನಿರ್ಧರಿಸಿದ್ದಾರೆ, ಇದು ಅವರ ನಿಜವಾದ ಪ್ರಯಾಣದ ಅಜೆಂಡಾದಿಂದ ಜನರ ಗಮನವನ್ನು ಬೇರೆಡೆಗೆ ತಿರುಗಿಸಲು ಕೊನೆಯ ಕ್ಷಣದ ಪ್ರಯತ್ನವಾಗಿದೆ ಎಂದು ಅಣ್ಣಾಮಲೈ ಹೇಳಿದರು.