ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಪಟ್ಟಿ ರಿಲೀಸ್ಗೆ ಕ್ಷಣಗಣನೆ ಶುರುವಾಗುತ್ತಿದ್ದು, ಇದರ ನಡುವೆ ಅನೇಕ ಹಿರಿಯ ನಾಯಕರಲ್ಲಿ ಟೆನ್ಸಶನ್ ಶುರುವಾಗಿದೆ.
ಈಗಾಗಲೇ ಕೆಎಸ್ ಈಶ್ವರಪ್ಪ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದು, ಅನೇಕರು ಟೆಕೆಟ್ ಕಳೆದುಕೊಳ್ಳುತ್ತಾರೆ ಎಂದು ಹೇಳಲಾಗುತ್ತಿದೆ.
ಇದರ ನಡುವೆ ಕರ್ನಾಟಕ ಕಾಂಗ್ರೆಸ್ ಟ್ವೀಟ್ನ ಮೂಲಕ ಬಿಜೆಪಿಯ ಟಿಕೆಟ್ ಬೆಂಕಿಗೆ ತುಪ್ಪ ಸುರಿದಿದೆ.
‘ಯಡಿಯೂರಪ್ಪ – ಔಟ್, ಹಾಲಾಡಿ ಶ್ರೀನಿವಾಸ ಶೆಟ್ಟಿ – ಔಟ್, ಈಶ್ವರಪ್ಪ – ಔಟ್, ಜಗದೀಶ್ ಶೆಟ್ಟರ್ – ಔಟ್? ಸಾವಿರ ತಲೆ ತೆಗೆದಾದರೂ ಸರಿ ಪ್ರಹ್ಲಾದ್ ಜೋಷಿ, ಬಿ ಎಲ್ ಸಂತೋಷರಿಗೆ ಜಾಗ ಮಾಡಿಕೊಡಲು ಅಮಿತ್ ಶಾ ತಯಾರಾಗಿದ್ದಾರೆ. ಸಂತೋಷ ಕೂಟದ ಆಟಕ್ಕೆ ಬಿಜೆಪಿಯ ಲಿಂಗಾಯತ ಹಾಗೂ ಹಿಂದುಳಿದ ವರ್ಗದ ನಾಯಕರು ಹೀನಾಯ ಅವಮಾನ ಎದುರಿಸಿ ಹೊರನಡೆಯುತ್ತಿದ್ದಾರೆ’ ಎಂದು ಟ್ವೀಟ್ ಮಾಡಿದೆ.
ಯಡಿಯೂರಪ್ಪ – ಔಟ್
ಹಾಲಾಡಿ ಶ್ರೀನಿವಾಸ ಶೆಟ್ಟಿ – ಔಟ್
ಈಶ್ವರಪ್ಪ – ಔಟ್
ಜಗದೀಶ್ ಶೆಟ್ಟರ್ – ಔಟ್?ಸಾವಿರ ತಲೆ ತೆಗೆದಾದರೂ ಸರಿ ಪ್ರಹ್ಲಾದ್ ಜೋಷಿ, ಬಿ ಎಲ್ ಸಂತೋಷರಿಗೆ ಜಾಗ ಮಾಡಿಕೊಡಲು ಅಮಿತ್ ಶಾ ತಯಾರಾಗಿದ್ದಾರೆ.
ಸಂತೋಷ ಕೂಟದ ಆಟಕ್ಕೆ ಬಿಜೆಪಿಯ ಲಿಂಗಾಯತ ಹಾಗೂ ಹಿಂದುಳಿದ ವರ್ಗದ ನಾಯಕರು ಹೀನಾಯ ಅವಮಾನ ಎದುರಿಸಿ ಹೊರನಡೆಯುತ್ತಿದ್ದಾರೆ.
— Karnataka Congress (@INCKarnataka) April 11, 2023
ಮತ್ತೊಂದು ಟ್ವೀಟ್ ಮಾಡಿ, ಮೊ-ಶಾ ಜೋಡಿಯ ಮಸಲತ್ತು ನೋಡಿದರೆ ಬೊಮ್ಮಾಯಿಯವರೂ ರಾಜಕೀಯ ನಿವೃತ್ತಿ ಘೋಷಿಸಿದರೆ ಯಾವುದೇ ಆಶ್ಚರ್ಯವಿಲ್ಲ! ಜೋಶಿ, ಸಂತೋಷರನ್ನು ಪ್ರತಿಷ್ಠಾಪಿಸಲು ಹವಣಿಸುತ್ತಿರುವ ಬೊಮ್ಮಾಯಿಯವರು ಅದೆಷ್ಟೇ ನಾಗಪುರದ ನೌಕರರು ಎನಿಸಿಕೊಂಡರೂ RSSಗೆ ಅಪಥ್ಯವೇ.. ಯಡಿಯೂರಪ್ಪರಂತೆ ಬೊಮ್ಮಾಯಿಯವರ ರಾಜಕೀಯ ಬದುಕೂ ದುರಂತ ಅಂತ್ಯ ಕಾಣಲಿದೆ ಎಂದು ಇನ್ನೊಂದು ಟ್ವೀಟ್ನಲ್ಲಿ ಬರೆದಿದೆ.
ಮೊ-ಶಾ ಜೋಡಿಯ ಮಸಲತ್ತು ನೋಡಿದರೆ ಬೊಮ್ಮಾಯಿಯವರೂ ರಾಜಕೀಯ ನಿವೃತ್ತಿ ಘೋಷಿಸಿದರೆ ಯಾವುದೇ ಆಶ್ಚರ್ಯವಿಲ್ಲ!
ಜೋಶಿ, ಸಂತೋಷರನ್ನು ಪ್ರತಿಷ್ಠಾಪಿಸಲು ಹವಣಿಸುತ್ತಿರುವ ಬೊಮ್ಮಾಯಿಯವರು ಅದೆಷ್ಟೇ ನಾಗಪುರದ ನೌಕರರು ಎನಿಸಿಕೊಂಡರೂ RSSಗೆ ಅಪಥ್ಯವೇ..
ಯಡಿಯೂರಪ್ಪರಂತೆ ಬೊಮ್ಮಾಯಿಯವರ ರಾಜಕೀಯ ಬದುಕೂ ದುರಂತ ಅಂತ್ಯ ಕಾಣಲಿದೆ.
— Karnataka Congress (@INCKarnataka) April 11, 2023
ಯಡಿಯೂರಪ್ಪನವರನ್ನುಕಣ್ಣೀರು ಹಾಕಿಸಿ ಪದಚ್ಯುತಿ ಮಾಡಲಾಯ್ತು. ಮಾಡಿದ್ದುಣ್ಣೋ ಮಹಾರಾಯ ಎಂಬಂತೆ ಈಶ್ವರಪ್ಪನವರ ರಾಜಕೀಯವನ್ನೇ ಮುಗಿಸಿಯಾಯ್ತು. ಜಗದೀಶ್ ಶೆಟ್ಟರ್ ಕಾಲವೂ ಸನ್ನಿಹಿತ. ಅಲ್ಲಿಗೆ ಬಿಜೆಪಿಯಲ್ಲಿ ಲಿಂಗಾಯತ ಹಾಗೂ ಹಿಂದುಳಿದ ವರ್ಗದ ನಾಯಕತ್ವವನ್ನು ಕಿತ್ತು ನಾಗಪುರದ ನೌಕರರಾದ ಜೋಶಿ ಹಾಗೂ ಸಂತೋಷ ಕೂಟ ಆಪೋಷನ ತೆಗೆದುಕೊಂಡಾಯ್ತು!’ ಎಂದು ಕಾಂಗ್ರೆಸ್ ತನ್ನ ಮೂರನೇ ಟ್ವೀಟ್ನಲ್ಲಿ ಬರೆದುಕೊಂಡಿದೆ.
ಸಂತೋಷ್ ಆಟಕ್ಕೆ ಯಡಿಯೂರಪ್ಪ ಬಲಿ.
ಪ್ರಹ್ಲಾದ್ ಜೋಷಿ ಆಟಕ್ಕೆ ಜಗದೀಶ್ ಶೆಟ್ಟರ್ ಬಲಿ.ನಾಗಪುರದ ಕರುಳುಬಳ್ಳಿಯ ಸಂಬಂಧವನ್ನೇ ಬಳಸಿ ಬಿಜೆಪಿಯಲ್ಲಿ ಪ್ರಾಭಲ್ಯ ಸಾಧಿಸಿರುವ ಪ್ರಹ್ಲಾದ್ ಜೋಶಿ ಲಿಂಗಾಯತ ನಾಯಕರನ್ನು ಹೊಂಡಕ್ಕೆ ಕೆಡವುದರಲ್ಲಿ ಯಶಸ್ವಿಯಾಗಿದ್ದಾರೆ.
ಮಾಜಿ ಸಿಎಂ ಒಬ್ಬರಿಗೆ ಟಿಕೆಟ್ ನಿರಾಕರಿಸುವಂತಹ ಅವಮಾನ ಇನ್ನೊಂದಿಲ್ಲ.
— Karnataka Congress (@INCKarnataka) April 11, 2023