ಹೊಸದಿಗಂತ ಡಿಜಿಟಲ್ ಡೆಸ್ಕ್:
ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಚೌಡ್ಲಾಪುರ ಗ್ರಾಮದಲ್ಲಿ ವಿದ್ಯುತ್ ಪರಿವರ್ತಕ (TC) ಅಳವಡಿಸುವಾಗ ಕೆ.ಪಿ. ಮನು (26) ಎಂಬ ಲೈನ್ಮ್ಯಾನ್ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದಾರೆ.
ಅಧಿಕಾರಿಗಳು ಸರಿಯಾದ ಲೈನ್ ಕ್ಲಿಯರೆನ್ಸ್ ನೀಡದೆ ಕೆಲಸಕ್ಕೆ ನಿಯೋಜಿಸಿದ್ದೇ ಈ ಸಾವಿಗೆ ನೇರ ಕಾರಣ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಮೃತ ಮನು ಅವರ ಪತ್ನಿ 9 ತಿಂಗಳ ಗರ್ಭಿಣಿಯಾಗಿದ್ದು, ಕುಟುಂಬದ ಆಧಾರಸ್ತಂಭವನ್ನು ಕಳೆದುಕೊಂಡು ಬೀದಿಗೆ ಬಿದ್ದಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗಿದ್ದು, ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



