ವಿದ್ಯುತ್‌ ಸ್ಪರ್ಶ: ಕರ್ತವ್ಯ ನಿರತ ಲೈನ್‌ ಮ್ಯಾನ್‌ ಸಾವು

ಹೊಸದಿಗಂತ ವರದಿ ಮಡಿಕೇರಿ:

ವಿದ್ಯುತ್ ಸ್ಪರ್ಶಿಸಿ ಕರ್ತವ್ಯನಿರತ ಲೈನ್‌ ಮ್ಯಾನ್‌ ಸ್ಥಳದಲ್ಲೇ ಸಾವನ್ನಪ್ಪಿರುವ ದುರಂತ ಘಟನೆ ವೀರಾಜಪೇಟೆ ಸಮೀಪದ ಹೆಗ್ಗಳ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ವೀರಾಜಪೇಟೆಯ ಲೈನ್‌ ಮ್ಯಾನ್ ಅನಿಲ್ ಎಂದು ಗುರುತಿಸಲಾಗಿದೆ. ಗುರುವಾರ ಬೆಳಗ್ಗೆ ವಿದ್ಯುತ್ ದುರಸ್ತಿಪಡಿಸುತ್ತಿದ್ದ ವೇಳೆ ತಂತಿಯಲ್ಲಿ ವಿದ್ಯುತ್ ಸ್ಪರ್ಶಿಸಿ ಅನಿಲ್ ಅವರು ಸ್ಥಳದಲ್ಲಿ ಮೃತಪಟ್ಟಿರುವುದಾಗಿ ಹೇಳಲಾಗಿದೆ.

ಪೊಲೀಸರು ಹಾಗೂ ಚೆಸ್ಕ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!