15-20 ಕ್ಷೇತ್ರ ಬಿಟ್ಟು ಉಳಿದ ಅಭ್ಯರ್ಥಿಗಳ ಪಟ್ಟಿ ನಾಳೆ ಬಿಡುಗಡೆ: ಯಡಿಯೂರಪ್ಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ನಾಳೆ (ಏ.11) ಬಿಡುಗಡೆ ಮಾಡುವ ವಿಶ್ವಾಸವಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.

ಬೆಂಗಳೂರು ನಗರದ ವಿಮಾನನಿಲ್ದಾಣದಲ್ಲಿ ಮಾತನಾಡಿದ ಅವರು, ಕರ್ನಾಟಕದ 224 ಕ್ಷೇತ್ರಗಳ ಬಗ್ಗೆ ದೆಹಲಿಯಲ್ಲಿ 2- 3 ಬಾರಿ ಸುದೀರ್ಘ ಚರ್ಚೆ ಆಗಿದೆ. ಪ್ರಧಾನಿ ನರೇಂದ್ರ ಮೋದಿಯವರೂ ಚರ್ಚೆಯಲ್ಲಿ ಭಾಗವಹಿಸಿದ್ದರು. ಟಿಕೆಟ್ ಹಂಚಿಕೆ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ ಎಂದು ತಿಳಿಸಿದರು.

ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲರೂ ಬದ್ಧ. ಚರ್ಚೆ ಮತ್ತು ವಿಧಾನಸಭೆಯ ಅಭ್ಯರ್ಥಿಗಳ ಪಟ್ಟಿಯನ್ನು ಗಮನಿಸಿದಾಗ ಬಿಜೆಪಿ ರಾಜ್ಯದಲ್ಲಿ ಬಹುಮತ ಪಡೆದು ಸರಕಾರ ರಚಿಸುವುದು ನಿಶ್ಚಿತ ಎಂಬ ಭಾವನೆ ಮೂಡಿದೆ ಎಂದರು.

15-20 ಕ್ಷೇತ್ರಗಳನ್ನು ಹೊರತುಪಡಿಸಿ ಉಳಿದೆಲ್ಲ ಕ್ಷೇತ್ರಗಳ ಅಭ್ಯರ್ಥಿಗಳ ವಿವರವನ್ನು ನಾಳೆ ಬಿಡುಗಡೆ ಮಾಡಬಹುದು ಎಂದರು.
ಹಾಲಿ ಶಾಸಕರಿಗೆ ಟಿಕೆಟ್ ನೀಡದಿರುವ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಚರ್ಚೆಗಳು ನಡೆದಿವೆ. ಯಾರೋ ಮೂರ್ನಾಲ್ಕು ಜನರಿಗೆ ಸಿಗದೆ ಇರಬಹುದು. ಈ ವಿಷಯದಲ್ಲಿ ಹೈಕಮಾಂಡ್ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!