ಸಾಹಿತ್ಯ ಸಮ್ಮೇಳನ : ಅಂಗಡಿ ಮಾಲೀಕ, ಗ್ರಾಹಕರಿಗೆ ನಡೆಯಿತು ಜಾಗೃತಿ ಜಾಥಾ

ಹೊಸ ದಿಗಂತ ವರದಿ, ಹಾವೇರಿ:

ಹಾವೇರಿ ನಗರದ ಹೊರ ವಲಯದ ಅಜ್ಜಯ್ಯನ ಗುಡಿ ಎದುರಿಗೆ ಜರಗುತ್ತಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಮೆರವಣಿಗೆಗೆ ಆಗಮಿಸುವ ತಂಡಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸಹಕಾರ ಕೋರಿ ಅಂಗಡಿ ಮುಂಗಟ್ಟುಗಳ ಮಾಲೀಕರಿಗೆ, ಗ್ರಾಹಕರಿಗೆ, ಸಾರ್ವಜನಿಕರಿಗೆ ಜಾಗೃತಿ ಜಾಥಾ ಮಾಡಲಾಯಿತು.

ನಗರದ ಶ್ರೀ ಪುರುಸಿದ್ದೇಶ್ವರ ದೇವಸ್ಥಾನದಿಂದ ನಗರದ ಹೊಸಮನಿ ಸಿದ್ದಪ್ಪ ವೃತ್ತದ ವರಿಗೆ ಜಾಥಾ ಸಾಗಿತು.

ಈ ಸಂದರ್ಭದಲ್ಲಿ ಮೆರವಣಿಗೆ ಸಮಿತಿಯ ಗೌರವಾಧ್ಯಕ್ಷ ಮಾಜಿ ಸಚಿವ ಬಸವರಾಜ ಶಿವಣ್ಣನವರ, ಸಮಿತಿಯ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಜಿಲ್ಲಾಧಿಕಾರಿ ರಘುನಂದನ ಮೂರ್ತಿ, ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಜಿ.ಪಂ ಸಿಇಓ ಮಹಮ್ಮದ್ ರೋಷನ್, ಉಪವಿಭಾಗಾಧಿಕಾರಿ ಶಿವಾನಂದ ಉಳ್ಳೆಗಡ್ಡಿ, ಮೆರವಣಿಗೆ ಸಮಿತಿಯ ಪದಾಧಿಕಾರಿಗಳು, ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

 

 

 

 

 

 

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!