ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಶೀಘ್ರವೇ ಐಸಿಯುನಿಂದ ವಾರ್ಡ್ಗೆ ಶಿಫ್ಟ್ ಮಾಡಲಾಗುತ್ತದೆ.
ಡಿಸೆಂಬರ್ 12 ರಂದು ನವದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅಡ್ವಾಣಿ ಅವರು ಈ ವರ್ಷದ ಆಗಸ್ಟ್ನಲ್ಲಿ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು ಮತ್ತು ಆಗಲೂ ಅವರು ನರರೋಗ ತಜ್ಞ ಡಾ. ವಿನೀತ್ ಸೂರಿ ಅವರ ಮೇಲ್ವಿಚಾರಣೆಯಲ್ಲಿದ್ದರು. ಅವರ ಆರೋಗ್ಯ ಸುಧಾರಿಸಿದ ನಂತರ ಅವರನ್ನು ಡಿಸ್ಚಾರ್ಜ್ ಮಾಡಲಾಗಿತ್ತು.