ಎಲ್.ಕೆ ಅಡ್ವಾಣಿ ಅವರನ್ನು ಭೇಟಿ ಮಾಡಿದ ಪೇಜಾವರ ಶ್ರೀ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿಯಲ್ಲಿ ಬಿಜೆಪಿ ಹಿರಿಯ ಧುರೀಣ ಎಲ್.ಕೆ ಅಡ್ವಾಣಿಯವರನ್ನು ಪೇಜಾವರ ಮಠಾಧೀಶಾದ ಶ್ರೀ ವಿಶ್ವಪ್ರಸನ್ನತೀರ್ಥರು ಭೇಟಿ ಮಾಡಿದ್ದಾರೆ.
ದೆಹಲಿಯ ಅವರ ನಿವಾಸದಲ್ಲಿ ಅಡ್ವಾಣಿಯವರೊಂದಿಗೆ ಉಭಯಕುಶಲೋಪರಿ ನಡೆಸಿ ಅವರಿಗೆ ದೀರ್ಘಾಯುರಾರೋಗ್ಯವನ್ನು ಶ್ರೀಕೃಷ್ಣನಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು. ಅಯೋಧ್ಯಾ ರಾಮಜನ್ಮಭೂಮಿ ಆಂದೋಲನದಲ್ಲಿ ಅಡ್ವಾಣಿ ಯವರ ಪಾತ್ರವನ್ನು ಶ್ರೀಗಳು ಬಣ್ಣಿಸಿ ಆ ಹೋರಾಟದ ಫಲವಾಗಿ ಇಂದು ಭವ್ಯರಾಮಮಂದಿರ ನಿರ್ಮಾಣಗೊಳ್ಳುವಂತಾಗಿದೆ ಎಂದರು. ಅಡ್ವಾಣಿಯವರಿಗೆ ಶ್ರೀ ಕೃಷ್ಣನ ಪ್ರಸಾದ ಮತ್ತು ಸ್ಮರಣಿಕೆಯನ್ನು ನೀಡಿ ಆಶೀರ್ವದಿಸಿದರು.
ಅಡ್ವಾಣಿ ಯವರ ಪುತ್ರಿ ಪ್ರತಿಭಾ ಅಡ್ವಾಣಿ ಸೇರಿದಂತೆ ಇತರರು ಪೇಜಾವರ ಶ್ರೀಗಳವರನ್ನು ಬರಮಾಡಿಕೊಂಡರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!