ಹೊಸ ದಿಗಂತ ವರದಿ, ಮೈಸೂರು:
ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ನಟರಾಜ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಸೂಕ್ತ ದಾಖಲೆಗಳಿಲ್ಲದ ಎರಡು ಕ್ಲಿನಿಕ್ಗಳನ್ನು ಮುಚ್ಚಿಸಿದ್ದಾರೆ.
ಹೆಬ್ಬಾಳು ಗ್ರಾಮದ ಜಯಲಕ್ಷ್ಮಿ ಮತ್ತು ದೊಡ್ಡೆಕೊಪ್ಪಲು ಗ್ರಾಮದ ರಾಮಕೃಷ್ಣ ಕ್ಲಿನಿಕ್ಗಳ ಮೇಲೆ ದಾಳಿ ನಡೆಸಿ ಸೂಕ್ತ ದಾಖಲೆಗಳಿಲ್ಲದ ಕಾರಣ ಕ್ಲಿನಿಕ್ಗಳನ್ನು ಮುಚ್ಚಿಸಲಾಯಿತು. ಸೂಕ್ತ ದಾಖಲೆಗಳನ್ನು ಒದಗಿಸಿದ ನಂತರ ಈ ಕ್ಲಿನಿಕ್ಗಳನ್ನು ತೆರೆಯಬೇಕು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಸೂಚಿಸಿದ್ದಾರೆ.