“ಲೋಕ” ಚುನಾವಣೆ ಎರಡನೇ ಹಂತ: ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಬರುವಂತೆ ಛತ್ತೀಸ್‌ಗಢ ಸಿಎಂ ಮನವಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ಆರಂಭವಾಗಿರುವ ಎರಡನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಮನವಿ ಮಾಡಿದ್ದಾರೆ.

“ಪ್ರಜಾಪ್ರಭುತ್ವವನ್ನು ಬಲಪಡಿಸಲು ಮತ್ತು ಪ್ರಜಾಪ್ರಭುತ್ವದ ಈ ಮಹಾನ್ ಹಬ್ಬದಲ್ಲಿ ಉತ್ಸಾಹದಿಂದ ಭಾಗವಹಿಸಲು ನಿಮ್ಮ ಅಮೂಲ್ಯವಾದ ಮತವನ್ನು ಬಳಸಬೇಕೆಂದು ನಾನು ಎಲ್ಲ ಮತದಾರರಲ್ಲಿ ಮನವಿ ಮಾಡುತ್ತೇನೆ” ಎಂದು ಅವರು ಹೇಳಿದರು.

ಚತ್ತೀಸ್‌ಗರ್‌ನ ರಾಜನಂದಗಾಂವ್, ಮಹಾಸಮುಂಡ್ ಮತ್ತು ಕಂಕೇರ್ ಕ್ಷೇತ್ರಗಳಲ್ಲಿ ಎರಡನೇ ಹಂತದ ಚುನಾವಣೆಯಲ್ಲಿ ಮತದಾನ ನಡೆಯುತ್ತಿದೆ.

ಮತದಾನವು ಬೆಳಗ್ಗೆ 7:00 ಗಂಟೆಗೆ ಆರಂಭವಾಗಿದ್ದು ಸಂಜೆ 6:00 ಗಂಟೆಯವರೆಗೆ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!