ದಿಗಂತ ವರದಿ ಮಡಿಕೇರಿ:
ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಗೌಡ ಅವರು ಮಂಗಳವಾರ ಭಾಗಮಂಡಲ ಹಾಗೂ ತಲಕಾವೇರಿ ಕ್ಷೇತ್ರಗಳಲ್ಲಿ ಪೂಜೆ ಸಲ್ಲಿಸುವ ಮೂಲಕ ಕೊಡಗಿನಲ್ಲಿ ತಮ್ಮ ಚುನಾವಣಾ ಪ್ರಚಾರ ಪ್ರಾರಂಭಿಸಿದರು.
ಲೋಕಸಭಾ ಅಭ್ಯರ್ಥಿಯಾಗಿ ಘೋಷಣೆಯಾದ ಬಳಿಕ ಪ್ರಥಮ ಬಾರಿಗೆ ಕೊಡಗಿಗೆ ಆಗಮಿಸಿದ ಅವರನ್ನು ಮಂಗಳವಾರ ಬೆಳಗ್ಗೆ ಆನೆಚೌಕೂರು ಗೇಟ್’ನಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು, ಇಬ್ಬರು ಶಾಸಕರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಶಾಲು ಹಾಗೂ ಹಾರ ಹಾಕುವ ಮೂಲಕ ಬರಮಾಡಿಕೊಂಡರು.
ಜಿಲ್ಲೆಗೆ ಲಕ್ಷ್ಮಣ್ ಅವರನ್ನು ಸ್ವಾಗತಿಸಿ ಮಾತನಾಡಿದ ಶಾಸಕ ಎ. ಎಸ್. ಪೂನ್ನಣ್ಣ ಅವರು ಮಾತನಾಡಿ, ಮೊದಲಿಗೆ ಭಗಂಡೇಶ್ವರ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿ, ನಂತರ ತಲಕಾವೇರಿಯಲ್ಲಿ ಮಾತೆ ಕಾವೇರಿಗೆ ನಮಿಸಿ ಪೂಜಿಸಿ, ಮಾಜಿ ಯೋಧರಿಗೆ, ಸ್ವಾತಂತ್ರ್ಯ ಹೋರಾಟಗಾರರಿಗೆ ನಮನ ಸಲ್ಲಿಸಿ ಇಂದಿನಿಂದ ಚುನಾವಣಾ ಪ್ರಚಾರ ಕಾರ್ಯವನ್ನು ಆರಂಭಿಸುತ್ತಿದ್ದೇವೆ. ಈ ಬಾರಿ ಲಕ್ಷ್ಮಣ್ ಗೌಡ ಅವರ ಗೆಲುವು ನಿಶ್ಚಿತ ಎಂದು ನುಡಿದರು.