ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆಗೆ ಏಪ್ರಿಲ್.26ರಂದು ರಾಜ್ಯದ 14 ಜಿಲ್ಲೆಗಳಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. ಈ ವೇಳೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮದ್ಯ ಮಾರಾಟಕ್ಕೂ ನಿಷೇಧ ಹೇರಲಾಗಿದೆ. ಹೀಗಾಗಿ ರಾಜ್ಯದ 14 ಜಿಲ್ಲೆ ವ್ಯಾಪ್ತಿಯಲ್ಲಿ ಇಂದಿನಿಂದ ಎರಡು ದಿನ ಎಣ್ಣೆ ಸಿಗೋದಿಲ್ಲ.
ಇನ್ಮುಂದೆ ಮನೆ ಮನೆಗೆ ತೆರಳಿ ಅಭ್ಯರ್ಥಿಗಳು ಮತಯಾಚನೆಯಲ್ಲಿ ತೊಡಗಬೇಕಿದೆ. ಅಲ್ಲದೇ ಮತದಾರರಲ್ಲದ ಕ್ಷೇತ್ರಗಳಲ್ಲಿ ಇರುವಂತ ರಾಜಯಕೀಯ ನಾಯಕರು ಕ್ಷೇತ್ರ ವ್ಯಾಪ್ತಿಯನ್ನು ಬಿಟ್ಟು ತೆರಳಬೇಕಿದೆ.
ಇನ್ನು ಬೆಂಗಳೂರು ಗ್ರಾಮಾಂತರ, ಉತ್ತರ, ಕೇಂದ್ರ, ದಕ್ಷಿಣ ಲೋಕಸಭಾ ಕ್ಷೇತ್ರಗಳು, ಹಾಸನ, ಚಿಕ್ಕಬಳ್ಳಾಪುರ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ತುಮಕೂರು, ಚಿತ್ರದುರ್ಗ, ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಏಪ್ರಿಲ್.26ರಂದು ಮತದಾನ ನಡೆಯಲಿದೆ. ಈಗಾಗಲೇ ಆಯಾ ಚಿಲ್ಲಾಧಿಕಾರಿಗಳು 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಇಂದು ಸಂಜೆ.6 ಗಂಟೆಯಿಂದ ಏಪ್ರಿಲ್.26ರ ಮಧ್ಯರಾತ್ರಿಯವರೆಗೆ ಮದ್ಯ ಮಾರಾಟಕ್ಕೂ ನಿಷೇಧ ಹೇರಲಾಗಿದೆ.