ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಇಂದು ಅಭ್ಯರ್ಥಿಗಳ ಹೊಸ ಪಟ್ಟಿಯನ್ನುಬಿಡುಗಡೆ ಮಾಡಿದೆ.
ಹಿಮಾಚಲ ಪ್ರದೇಶದ ಕಾಂಗ್ರಾದಿಂದ ಆನಂದ್ ಶರ್ಮಾ ಸ್ಪರ್ಧಿಸಲಿದ್ದು, ರಾಜ್ ಬಬ್ಬರ್ ಹರಿಯಾಣದ ಗುರುಗ್ರಾಮ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ಹಿಮಾಚಲ ಪ್ರದೇಶದ ಹಮೀರ್ಪುರದಿಂದ ಸತ್ಪಾಲ್ ರೈಜಾದಾ ಮತ್ತು ಮುಂಬೈ ಉತ್ತರದಿಂದ ಭೂಷಣ್ ಪಾಟೀಲ್ ಅವರು ಸ್ಪರ್ಧಿಸಲಿದ್ದಾರೆ.
ಕಾಂಗ್ರೆಸ್ ಈ ಹಿಂದೆ ಹರಿಯಾಣದ 8 ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಿಸಿತ್ತು. ಆದರೆ ಗುರುಗ್ರಾಮ್ನಿಂದ ಅಭ್ಯರ್ಥಿಯನ್ನು ಇನ್ನೂ ಘೋಷಿಸಿರಲಿಲ್ಲ. ಈಗ ಕಾಂಗ್ರೆಸ್ ಪಕ್ಷವು ಅಲ್ಲಿನ ಅಭ್ಯರ್ಥಿಯ ಹೆಸರನ್ನು ಘೋಷಿಸಿದೆ. ಇಂದು ಕಾಂಗ್ರೆಸ್ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ರಾಜ್ ಬಬ್ಬರ್ ಹೆಸರನ್ನು ಪ್ರಕಟಿಸಲಾಗಿದೆ. ಈ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಜೆಪಿ ಈಗಾಗಲೇ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ.
ಗುರುಗ್ರಾಮ್ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಬಹಳ ಹಿಂದೆಯೇ ಘೋಷಿಸಿತ್ತು. ಇಲ್ಲಿ ಭಾರತೀಯ ಜನತಾ ಪಕ್ಷದಿಂದ ರಾವ್ ಇಂದ್ರಜಿತ್ ಸಿಂಗ್ ಸ್ಪರ್ಧಿಸಿದ್ದಾರೆ. ಜನನಾಯಕ ಜನತಾ ಪಕ್ಷ ಅಂದರೆ ಜೆಜೆಪಿ ಕೂಡ ಈ ಕ್ಷೇತ್ರದಿಂದ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಫಜಿಲ್ ಪುರಿಯಾ ಎಂದೇ ಖ್ಯಾತರಾಗಿರುವ ಖ್ಯಾತ ಗಾಯಕ ರಾಹುಲ್ ಯಾದವ್ ಅವರಿಗೆ ಜೆಜೆಪಿ ಇಲ್ಲಿಂದ ಟಿಕೆಟ್ ನೀಡಿದೆ. ಇದೀಗ ಬ್ಬರ್ ಅವರನ್ನು ಈಗ ಕಾಂಗ್ರೆಸ್ನಿಂದ ಕಣಕ್ಕಿಳಿಸಲಾಗಿದೆ.