ಲೋಕಸಭೆ ಚುನಾವಣೆ: 8 ಅಭ್ಯರ್ಥಿಗಳನ್ನು ಘೋಷಿಸಿದ ಏಕನಾಥ್ ಶಿಂಧೆ ಬಣ!

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ನೇತೃತ್ವದ ಶಿವಸೇನಾ (Shiv Sena) ಗುರುವಾರ ರಾಜ್ಯದ ಎಂಟು ಲೋಕಸಭಾ ಸ್ಥಾನಗಳಿಗೆ (Lok Sabha Elections) ಅಭ್ಯರ್ಥಿಗಳನ್ನು ಘೋಷಿಸಿದ್ದಾರೆ.

ಏಪ್ರಿಲ್ 19 ರಂದು ಮತದಾನ ನಡೆಯಲಿರುವ ರಾಮ್‌ಟೆಕ್ (SC) ಕ್ಷೇತ್ರದಿಂದ ಮಾಜಿ ಕಾಂಗ್ರೆಸ್ ಶಾಸಕ ರಾಜು ಪರ್ವೆಗೆ ಟಿಕೆಟ್ ನೀಡಲಾಗಿದೆ. ಪರ್ವೆ ಇತ್ತೀಚೆಗೆ ಶಿವಸೇನಾ ಸೇರಿದ್ದರು.

ಪಟ್ಟಿಯಲ್ಲಿರುವ ಇತರ ಏಳು ಹೆಸರುಗಳು ಎಲ್ಲಾ ಹಾಲಿ ಸಂಸದರದ್ದು. ರಾಹುಲ್ ಶೆವಾಲೆ (ಮುಂಬೈ ಸೌತ್ ಸೆಂಟ್ರಲ್), ಸಂಜಯ್ ಮಾಂಡ್ಲಿಕ್ (ಕೊಲ್ಹಾಪುರ), ಸದಾಶಿವ ಲೋಖಂಡೆ (ಶಿರಡಿ (ಎಸ್‌ಸಿ)) ಪ್ರತಾಪ್ ರಾವ್ ಜಾಧವ್ (ಬುಲ್ಧಾನ), ಹೇಮಂತ್ ಪಾಟೀಲ್ (ಹಿಂಗೋಲಿ), ಶ್ರೀರಂಗ್ ಬರ್ನೆ ( ಮಾವಲ್) ಮತ್ತು ಧೈರ್ಯಶೀಲ ಮನೆ (ಹಟಕಣಂಗಲೆ) ಅವರಿಗೆ ಶಿವಸೇನಾ ಸೀಟು ನೀಡಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!