ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡು ಮಾಜಿ ಮುಖ್ಯಮಂತ್ರಿ ಓ ಪನ್ನೀರಸೆಲ್ವಂ ಅವರು ತೇಣಿಯಲ್ಲಿ ಮತ ಚಲಾಯಿಸಿದ್ದು, ತಮಿಳುನಾಡಿನಲ್ಲಿ ಬಿಜೆಪಿ ಮೈತ್ರಿಕೂಟ ಗೆಲ್ಲಲಿದೆ ಎಂದು ಹೇಳಿದ್ದಾರೆ.
ಒ ಪನ್ನೀರಸೆಲ್ವಂ ಅವರು ಬಿಜೆಪಿ ನೇತೃತ್ವದ ಎನ್ಡಿಎ ಬೆಂಬಲಿತ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಎಐಎಡಿಎಂಕೆಯಿಂದ ಜಯಪೆರುಮಾಳ್, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ನಿಂದ ಕೆ ನವಸ್ಕನಿ ಮತ್ತು ನಾಮ್ ತಮಿಲರ್ ಕಚ್ಚಿಯಿಂದ ಚಂದ್ರಪ್ರಭಾ ಈ ಸ್ಥಾನಕ್ಕೆ ಪ್ರಮುಖ ಅಭ್ಯರ್ಥಿಗಳು.
ಸಾರ್ವತ್ರಿಕ ಚುನಾವಣೆಯ ಮೊದಲ ಹಂತದಲ್ಲಿ ತಮಿಳುನಾಡಿನ ಎಲ್ಲಾ 39 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ.