ಲೋಕಸಭಾ ಚುನಾವಣೆ: ಪಶ್ಚಿಮ ಬಂಗಾಳದ ಜನತೆಗೆ ‘ಪಂಚ’ ಭರವಸೆ ನೀಡಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಜನತೆಗೆ ಐದು ಭರವಸೆಗಳನ್ನು ನೀಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಪ್ರಚಾರ ನಡೆಸುತ್ತಿದ್ದ ಮೋದಿ ಅವರು ರಾಜ್ಯದ ಜನತೆಗೆ ಐದು ಭರವಸೆಗಳನ್ನು ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಲೋಕಸಭಾ ಚುನಾವಣಾ ಪೂರ್ವ ಚಟುವಟಿಕೆಗಳಲ್ಲಿ ನಿರತರಾಗಿದ್ದಾರೆ. ಕೆಲವು ವರ್ಷಗಳ ಹಿಂದೆ, ಟಿಎಂಸಿ ಸರ್ಕಾರದ ಮೇಲೆ ಸಿಎಜಿ ವರದಿ ಬಿಡುಗಡೆ ಮಾಡಿತ್ತು. ವರದಿಯ ಪ್ರಕಾರ, ಈ ವರದಿಯಲ್ಲಿ ಟಿಎಂಸಿ 2,30,000 ಕೋಟಿ ರೂ.ಗಳನ್ನು ಖಾತೆಗೆ ನೀಡಿಲ್ಲ ಎಂದು ಹೇಳಲಾಗಿದೆ.

ಈ ಹಣವನ್ನು ಹೇಗೆ? ಎಲ್ಲಿ ಖರ್ಚು ಮಾಡಲಾಗಿದೆ ಇದಕ್ಕೆ ಲೆಕ್ಕವಿಲ್ಲ, ಟಿಎಂಸಿ ಎಷ್ಟು ಭ್ರಷ್ಟಾಚಾರ ಮಾಡಿದೆ ಎಂಬುದಕ್ಕೆ ಶಿಕ್ಷಕರ ನೇಮಕಾತಿಯೇ ಉದಾಹರಣೆ ಎಂದರು.

ನಾನು ಬಂಗಾಳಕ್ಕೆ ಐದು ಗ್ಯಾರಂಟಿಗಳನ್ನು ನೀಡುತ್ತಿದ್ದೇನೆ . SC, ST, ಅಥವಾ OBC ಯ ಮೀಸಲಾತಿಯನ್ನು ತಡೆಯಲು ಯಾರಿಗೂ ಸಾಧ್ಯವಾಗುವುದಿಲ್ಲ. ಅಯೋಧ್ಯೆಯಲ್ಲಿನ ರಾಮ ಮಂದಿರದ ಕುರಿತು ಸುಪ್ರೀಂ ಕೋರ್ಟ್‌ನ ತೀರ್ಪನ್ನು ಯಾರೂ ತಳ್ಳಿಹಾಕಲು ಸಾಧ್ಯವಿಲ್ಲ ಮತ್ತು ಸಿಎಎಯನ್ನು ಮುಗಿಸಲು ಯಾರಿಗೂ ಸಾಧ್ಯವಾಗುವುದಿಲ್ಲ ಎಂದು ಮೋದಿ ಹೇಳಿದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!