ಲೋಕಸಭೆ ಭದ್ರತಾ ಲೋಪ ಪ್ರಕರಣ: 6ನೇ ಆರೋಪಿಗೆ 7 ದಿನ ಪೊಲೀಸ್ ಕಸ್ಟಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆ ಭದ್ರತಾ ಲೋಪ ಪ್ರಕರಣದಲ್ಲಿ 6ನೇ ಆರೋಪಿ ಮಹೇಶ್ ಕುಮಾವತ್ (Mahesh Kumawat) ಅನ್ನು ದೆಹಲಿ ಪೊಲೀಸರು ಶನಿವಾರ ಬಂಧಿಸಿದ್ದು, ಕೋರ್ಟ್ ಆತನನ್ನ 7 ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

‘ಮಾಸ್ಟರ್ ಮೈಂಡ್’ ಲಲಿತ್ ಝಾ ದೆಹಲಿಯಿಂದ ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಆರೋಪದ ಮೇಲೆ ಮಹೇಶ್ ಕುಮಾವತ್’ನನ್ನ ಇಂದು ವಶಕ್ಕೆ ತೆಗೆದುಕೊಳ್ಳಲಾಗಿದೆ.

ಮಹೇಶ್ ಕುಮಾವತ್ ಅವರು ಗುರುವಾರ ರಾತ್ರಿ ಲಲಿತ್ ಝಾನೊಂದಿಗೆ ಪೊಲೀಸ್ ಠಾಣೆಗೆ ತಾನಾಗಿಯೇ ಬಂದಿದ್ದು, ಇಬ್ಬರನ್ನೂ ವಿಶೇಷ ಸೆಲ್’ಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಆರೋಪಿಗಳು ರಚಿಸಿದ ಈಗ ಅಳಿಸಲಾದ ಭಗತ್ ಸಿಂಗ್ ಫ್ಯಾನ್ ಕ್ಲಬ್ ಪುಟದ ಸದಸ್ಯರಾಗಿದ್ದರು. ಇನ್ನು ಸಾಕ್ಷ್ಯ ನಾಶ ಮತ್ತು ಕ್ರಿಮಿನಲ್ ಪಿತೂರಿ ಆರೋಪದ ಮೇಲೆ ಕುಮಾವತ್ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆತನನ್ನ 7 ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!