ಲೋಕಸಭೆಯ ಭದ್ರತಾ ಲೋಪ: ಆರು ಮಂದಿ ಪೊಲೀಸರ ವಶಕ್ಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆಯ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಆರು ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ದುಷ್ಕರ್ಮಿಗಳ ತಂಡದಲ್ಲಿ 7 ಆರೋಪಿಗಳು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.ಸದ್ಯ ಆರು ಜನರನ್ನು ವಶಕ್ಕೆ ಪಡೆದಿರುವ ದೆಹಲಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

ನಾಲ್ವರು ಆರೋಪಿಗಳು ಗುರುಗ್ರಾಮದ ಸೆಕ್ಟರ್ 7 ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ತಂಗಿದ್ದರು. ಮೂರು ತಿಂಗಳಿಂದ ದಾಳಿಗೆ ಸಂಚು ರೂಪಿಸಿದ್ದರು.ಸಂಸತ್ತಿನ ಭದ್ರತಾ ಲೋಪ ಸಂಚು ರೂಪಿಸುವಲ್ಲಿ ಆರು ಮಂದಿ ಭಾಗಿಯಾಗಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ಬಹಿರಂಗಪಡಿಸಿದ್ದಾರೆ.

ನಾಲ್ವರು ಶಂಕಿತರಾದ ಸಾಗರ್ ಶರ್ಮಾ, ಮನೋರಂಜನ್, ನೀಲಂ(42), ಮತ್ತು ಅಮೋಲ್ (25) ಅವರನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!