ವಿಜಯಪುರದ ಆರ್‌ಟಿಒ ಅಧಿಕಾರಿ ನಿವಾಸದ ಮೇಲೆ ಲೋಕಾ ದಾಳಿ

ದಿಗಂತ ವರದಿ ವಿಜಯಪುರ:

ಆರ್ ಟಿ ಒ ಅಧಿಕಾರಿ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿರುವ ಘಟನೆ ಇಲ್ಲಿನ ಚಾಲುಕ್ಯ ನಗರದಲ್ಲಿ ನಡೆದಿದೆ.

ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಷಣ್ಮುಖಪ್ಪ ತೀರ್ಥ ನಿವಾಸದ ಮೇಲೆ ದಾಳಿ ಮಾಡಲಾಗಿದೆ. ಲೋಕಾಯುಕ್ತ ಎಸ್ಪಿ ಟಿ ಮಲ್ಲೇಶ ನೇತೃತ್ವದಲ್ಲಿ ದಾಳಿ ಮಾಡಿದ್ದು, ಆರ್ ಟಿ ಒ ಅಧಿಕಾರಿ ಷಣ್ಮುಖಪ್ಪ ನಿವಾಸ ಸೇರಿದಂತೆ ವಿಜಯಪುರ ನಗರದಲ್ಲಿರುವ ಸಂಬಂಧಿಕರ ನಿವಾಸಗಳ ಮೇಲೂ ದಾಳಿ ನಡೆದಿದೆ.

ದಾಖಲಾತಿಗಳ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಡಿಎಸ್ಪಿ ಸುರೇಶ ರೆಡ್ಡಿ, ಇನ್ಸಪೆಕ್ಟ‌ರ್ ಆನಂದ ಠಕ್ಕನ್ನವರ ಹಾಗೂ ಇತರ ಸಿಬ್ಬಂದಿ ತಂಡ ದಾಳಿ ನಡೆಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!