ಬೆಳ್ಳಂಬೆಳಗ್ಗೆ ಕೊಡಗಿನ ವಿವಿಧೆಡೆ ಲೋಕಾಯುಕ್ತ ದಾಳಿ

ದಿಗಂತ ವರದಿ ಮಡಿಕೇರಿ:

ಕಡೆಗಳಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಕುಶಾಲನಗರದಲ್ಲಿ ಹಾಗೂ ಸೋಮವಾರಪೇಟೆ ಮತ್ತು ಮಡಿಕೇರಿಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ಸೋಮವಾರಪೇಟೆ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಜಯಣ್ಣ,ಸೋಮವಾರಪೇಟೆ ತಾ.ಪಂ.ಇಂಜಿನಿಯರಿಂಗ್ ವಿಭಾಗದ ಸಹಾಯಕ ಇಂಜಿನಿಯರ್ ಫಯಾಜ್ ಅಹ್ಮದ್ ಅವರ ನಿವಾಸಗಳ ಹಾಗೂ ಕಚೇರಿ ಮೇಲೆ ಏಕಕಾಲದಲ್ಲಿ ಈ ದಾಳಿ ನಡೆದಿದೆ.

ಕುಶಾಲನಗರದ ಹೌಸಿಂಗ್ ಬೋರ್ಡ್ ಬಡಾವಣೆಯಲ್ಲಿನ ಜಯಣ್ಣ ಅವರ ಮನೆ, ದ.ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ಕಚೇರಿ, ಕುಶಾಲನಗರದ ಯೋಗಾನಂದ ಬಡಾವಣೆಯಲ್ಲಿರುವ ಫಯಾಜ್ ಅಹಮದ್ ಮನೆ ಹಾಗೂ ಸೋಮವಾರಪೇಟೆಯ ಕಚೇರಿ,ಮಡಿಕೇರಿಯಲ್ಲಿರುವ ಅತ್ತೆ ಮನೆಯಲ್ಲೂ ಶೋಧ ನಡೆದಿದೆ.
ಕೊಡಗು ಲೋಕಾಯುಕ್ತ ಡಿವೈಎಸ್ಪಿ‌ ಪವನ್ ಕುಮಾರ್, ಇನ್ಸ್ಪೆಕ್ಟರ್ ಲೋಕೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!