BIG NEWS | ಮತ್ತೆ ಅಖಾಡಕ್ಕೆ ಇಳಿದ ಲೋಕಾಯುಕ್ತ: BBMP ಜಂಟಿ ಆಯುಕ್ತರ ಮೇಲೆ ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಭ್ರಷ್ಟಾಚಾರ ನಿಗ್ರಹ ದಳವನ್ನು ರದ್ದುಗೊಳಿಸಿ ಲೋಕಾಯುಕ್ತಕ್ಕೆ ಮತ್ತೆ ಅಧಿಕಾರ ನೀಡಿದ ಬೆನ್ನಲ್ಲೇ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ಜಂಟಿ ಆಯುಕ್ತ ಶ್ರೀನಿವಾಸ್‌ ಕಚೇರಿಯ ಮೇಲೆ ದಾಳಿ ಮಾಡಲಾಗಿದೆ. ಈ ಮೂಲಕ ರಾಜ್ಯದಲ್ಲಿ ಮತ್ತೆ ಅಬ್ಬರಿಸಲು ಸಜ್ಜಾಗಿದೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತಾವಧಿಯಲ್ಲಿ ಭ್ರಷ್ಟಾಚಾರ ಕೇಳಿಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರವನ್ನು ಕಿತ್ತುಕೊಂಡು ಭ್ರಷ್ಟಾಚಾರ ನಿಗ್ರಹ ದಳ ಆರಂಭಿಸಲಾಗಿತ್ತು. ಇದೀಗ ಮತ್ತೆ ಅಧಿಕಾರ ಸಿಗುತ್ತಲೇ ದಾಳಿ ಮಾಡುವ ಮೂಲಕ ಭ್ರಷ್ಟರ ಬೇಟೆಗೆ ಲೋಕಾಯುಕ್ತ ಪೊಲೀಸರು ಸಿದ್ಧರಾಗಿದ್ದಾರೆ.
ಪಶ್ಚಿಮ ವಿಭಾಗದ ಬಿಬಿಎಂಪಿ ಕಚೇರಿಯಲ್ಲಿ ಲಂಚಕ್ಕೆ ಬೇಡಿಕೆ ಇಟ್ಟ ಮಾಹಿತಿ ಮೇರೆಗೆ ಲೋಕಾಯುಕ್ತ ದಾಳಿ ನಡೆದಿದೆ. ಮಲ್ಲೇಶ್ವರಂ ಬಳಿ ಇರುವ ಬಿಬಿಎಂಪಿ ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ದಾಳಿ ವೇಳೆ ಹಣದ ಸಮೇತ ನಿಂತಿದ್ದ ಶ್ರೀನಿವಾಸ್ ಪಿಎ ಉಮೇಶ್. ಖಾತೆ ಬದಲಾವಣೆ ವಿಚಾರಕ್ಕೆ ಲಂಚದ ಬೇಡಿಕೆ ಇಟ್ಟಿದ್ದ ಶ್ರೀನಿವಾಸ್‌, ಈ ಬಗ್ಗೆ ದೂರುದಾರರು ನೀಡಿದ ಮಾಹಿತಿ ಅನ್ವಯ ದಾಳಿ ನಡೆಸಲಾಗಿದೆ.
DySP ಮಂಜಯ್ಯ ,ಶಂಕರ್ ನಾರಾಯಣ್ ನೇತೃತ್ವದ ಲೋಕಾಯುಕ್ತ ಟೀಂನಲ್ಲಿ ಒಟ್ಟು 8 ಜನ ಅಧಿಕಾರಿಗಳಿದ್ದರು ಎಂದು ಮೂಲಗಳು ತಿಳಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!