ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಕೆ.ಆರ್ ಸರ್ಕಲ್ ಅಂಡರ್ ಪಾಸ್ನಲ್ಲಿ ಮುಳುಗಿ ಟೆಕ್ಕಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್ ಜಾರಿ ಮಾಡಿದೆ.
ಪ್ರಕರಣ ಸಂಬಂಧ ಲೋಕಾಯುಕ್ತ ಸುಮೋಟೋ ಕೇಸ್ ದಾಖಲಿಸಿದ್ದು, ಬಿಬಿಎಂಪಿ ಮುಖ್ಯ ಆಯುಕ್ತರು ಸೇರಿ 8 ಮಂದಿ ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ. ಪ್ರಕರಣದ ಸಂಪೂರ್ಣ ವರದಿ ನೀಡುವಂತೆ ಸೂಚನೆ ನೀಡಿದ್ದು, ವರದಿ ನೀಡಲು ಲೋಕಾಯುಕ್ತ ಬಿಬಿಎಂಪಿ ಅಧಿಕಾರಿಗಳಿಗೆ 2 ವಾರಗಳ ಗಡುವು ನೀಡಿದೆ.
ಮೇ 21ರಂದು ಬೆಂಗಳೂರಿನಲ್ಲಿ ವರುಣನ ಆರ್ಭಟಕ್ಕೆ ಯುವತಿ ಬಲಿಯಾಗಿದ್ದರು. ನಗರದ ಕೆಆರ್ ಸರ್ಕಲ್ನ ಅಂಡರ್ ಪಾಸ್ನಲ್ಲಿ ನಿಂತಿದ್ದ ಮಳೆ ನೀರಿನಲ್ಲಿ ಕಾರು ಮುಳುಗಿ ಟೆಕ್ಕಿ ಭಾನುರೇಖಾ ಮೃತಪಟ್ಟಿದ್ದರು.