ಹೊಸ ದಿಗಂತ ವರದಿ , ಮಡಿಕೇರಿ:
ಲೋಕಾಯುಕ್ತ ಪೊಲೀಸರು ನಡೆಸಿದ ಕಾರ್ಯಾಚರಣೆ ಸಂದರ್ಭ ಅರಣ್ಯ ಇಲಾಖೆಯ ಮಹಿಳಾ ಅಧಿಕಾರಿಯೊಬ್ಬರು ಬಲೆಗೆ ಬಿದ್ದಿದ್ದಾರೆ.
ಉಪ ಅರಣ್ಯ ಸಂರಕ್ಷಣಾಧಿಕಾರಿ ಕು. ಪೂರ್ಣಿಮಾ ಅವರೇ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಅಧಿಕಾರಿ.
ವಲಯ ಅರಣ್ಯಾಧಿಕಾರಿಗಳಾದ ಮಯೂರ, ಉದಯ ಹಾಗೂ ಕಾರ್ವೇಕರ ಎಂಬವರಿಂದ 50 ಸಾವಿರ ರೂ.ಗಳ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಡಿವೈಎಸ್ಪಿ ಪವನ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆದಿದೆ.
ಲೋಕಾಯುಕ್ತರು ಇದೀಗ ತಪಾಸಣೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.