ಹೊಸದಿಗಂತ ಡಿಜಿಟಲ್ ಡೆಸ್ಕ್ :
ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಬಿಡಬ್ಲೂಎಸ್ಎಸ್ ಇಲಾಖೆಯ ಮುಖ್ಯ ಲೆಕ್ಕ ಪರಿಶೋಧಕ ಪ್ರಶಾಂತ್ ವಾಡಾಳ್ ಲಂಚ ಪಡೆಯುವ ವೇಳೆ ಲೋಕಾಯುಕ್ತರ ಬಲೆಗೆ ಬಿದ್ದ ಪ್ರಕರಣ ಸಂಬಂಧ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಚನ್ನಗಿರಿ ತಾಲ್ಲೂಕಿನ ಚನ್ನೇಶಪುರ(ಮಾಡಾಳ್) ಗ್ರಾಮದಲ್ಲಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಮನೆಯಲ್ಲಿ ಶೋಧ ನಡೆಸಿದ್ದಾರೆ.
ಲೋಕಾಯುಕ್ತ ಎಸ್ಪಿ ಎಂ.ಎಸ್. ಕೌಲಾಪುರೆ ನೇತೃತ್ವದಲ್ಲಿ ಅಧಿಕಾರಿಗಳು ಇಡೀ ಮನೆಯಲ್ಲಿ ಶೋಧ ನಡೆಸಿದರು. 4 ಬ್ಯಾಗ್ಗಳಲ್ಲಿ ಮಹತ್ವದ ದಾಖಲೆ ಪತ್ರಗಳನ್ನು ಸಂಗ್ರಹಿಸಿದ್ದಾರೆ.
ಬೆಂಗಳೂರಿನ ಕೆಎಸ್ಡಿಎಲ್ ಕಚೇರಿಯಲ್ಲಿ ಬುಧವಾರ ಟೆಂಡರ್ಗೆ ಸಂಬಂಧಪಟ್ಟಂತೆ ಟೆಂಡರ್ದಾರನಿಂದ ₹ 40 ಲಕ್ಷ ಲಂಚ ಪಡೆಯುತ್ತಿದ್ದಾಗ ಪ್ರಶಾಂತ್ ಲೋಕಾಯುಕ್ತ ಬಲೆಗೆ ಬಿದ್ದಿದ್ದರು.