ಲೋಕಾಯುಕ್ತ ಸಮರ: ರೆಡ್ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಲಂಚ ಪಡೆಯುತ್ತಿದ್ದ ಕಂದಾಯ ಇಲಾಖೆ ಅಧಿಕಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯ ರಾಜಧಾನಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಸಮರ ಮುಂದುವರಿದಿದ್ದು, ಬೆಂಗಳೂರು ಕಂದಾಯ ಭವನ ಕಚೇರಿಯಲ್ಲಿ ಲಂಚ ಪಡೆದುಕೊಳ್ಳುವಾಗ ವಿಶೇಷ ಶಿರಸ್ತೇದಾರ್ ರೆಡ್ ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ.
ಕಂದಾಯ ಭವನ ಕಚೇರಿಯಲ್ಲಿ ವಿಶೇಷ ಶಿರಸ್ತೇದಾರ್ ಆಗಿರುವ ಶ್ರೀಕಾಂತ್ ಲೋಕಾಯುಕ್ತ ಬಲೆಗೆ ಬಿದ್ದವರು. ದೂರುದಾರದಿಂದ 45 ಸಾವಿರ ಲಂಚದ ಹಣ ಪಡೆಯುವ ವೇಳೆ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆದಿದೆ.
ಬಿಡಿಎಗೆ ಸಲ್ಲಿಸಲು ನೈಜತಾ ಪ್ರಮಾಣಪತ್ರಕ್ಕೆ ಅರ್ಜಿ ಸಲ್ಲಿಸಿದ್ದ ವ್ಯಕ್ತಿಯಿಂದ ಶಿರಸ್ತೇದಾರ್ 13 ಲಕ್ಷ ರೂಪಾಯಿಗೆ ಬೇಡಿಕೆಯಿಟ್ಟಿದ್ದರು. ಇಂದು 45 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!