ಹೊಸದಿಗಂತ ವರದಿ, ಅಂಕೋಲಾ:
ಟ್ಯಾಂಕರ್ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದು ಕಾರು ಚಾಲಕ ಗಾಯಗೊಂಡ ಘಟನೆ ಅಂಕೋಲಾ ತಾಲೂಕಿನ ಅಡ್ಲೂರ್ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಸಂಭವಿಸಿದೆ.
ಕಾರು ಚಾಲಕ ಬೆಂಗಳೂರು ಉತ್ತರ ಹಳ್ಳಿ ನಿವಾಸಿ ಅಭಿಷೇಕ ಬರ್ದನ್(36) ಗಾಯಗೊಂಡ ವ್ಯಕ್ತಿ ಯಾಗಿದ್ದು ಅಂಕೋಲಾ ಕಡೆಯಿಂದ ಹುಬ್ಬಳ್ಳಿ ಕಡೆ ಸಾಗುತ್ತಿರುವಾಗ ಎದುರಿನಿಂದ ಅತಿ ವೇಗದಲ್ಲಿ ಬೇರೊಂದು ವಾಹನಕ್ಕೆ ಓವರ್ ಟೇಕ್ ಮಾಡಿ ಬಂದ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಕ್ಯಾಂಟರ್ ಲಾರಿ ನಂ ಕೆ.ಎ 25 ಡಿ 1611 ಅಪಘಾತ ಪಡಿಸಿ ಲಾರಿ ನಿಲ್ಲಿಸಿದೇ ಪರಾರಿಯಾಗಿದ್ದು ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಅಂಕೋಲಾ ಪೋಲಿಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.