ಹೊಸದಿಗಂತ ವರದಿ ಯಲ್ಲಾಪುರ:
ತಾಲೂಕಿನ ಅರಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಇಂದು ಬೆಳಗ್ಗೆ ನಡೆದಿದೆ. ಸಿಮೆಂಟ್ ಲಾರಿಗೆ ಬೆಂಕಿ ತಗುಲಿ ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ನಡೆದಿದೆ.
ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರಾಗಿದ್ದಾನೆ. ಬಾಗಲಕೋಟೆಯಿಂದ ಸಿಮೆಂಟ್ ತುಂಬಿಕೊಂಡು ಮಂಗಳೂರಿಗೆ ಸಾಗಿಸುತ್ತಿದ್ದ ಲಾರಿಯ ಬ್ರೇಕ್ ಲೈನರ್ ಸವೆದು ಹೀಟ್ ನಿಂದ ಟಯರ್ ಗೆ ಬೆಂಕಿ ತಗಲಿದೆ ಎಂದು ತಿಳಿದು ಬಂದಿದ್ದು, ಬೆಂಕಿಯ ಕೆನ್ನಾಲಿಗೆ ಲಾರಿಗೆ ಚಾಚಿಕೊಂಡಿತ್ತು. ಮಾಹಿತಿ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳ ತೆರಳಿ ಬೆಂಕಿ ನಂದಿಸಿದ್ದಾರೆ. ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಈ ಕುರಿತು ಪೊಲೀಸ್ ಠಾಣಾ ಪ್ರಕರಣ ದಾಖಲಾಗಿದೆ.