ಲಾರಿಗೆ ಡಿಕ್ಕಿಯಾದ ಬೈಕ್: ಇಬ್ಬರು ಸವಾರರು‌ ಸ್ಥಳದಲ್ಲೇ ದುರ್ಮರಣ

ಹೊಸದಿಗಂತ ವರದಿ, ಅಂಕೋಲಾ
ಬೈಕಿಗೆ ಲಾರಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಮತ್ತು ಹಿಂಬದಿ ಸವಾರ ಸ್ಥಳದಲ್ಲಿಯೇ ಮೃತ ಪಟ್ಟ ಘಟನೆ ತಾಲೂಕಿನ ಕಂಚಿನಬಾಗಿಲ ಬೊಗ್ರಿಬೈಲ್ ಸಮೀಪ ಸಂಭವಿಸಿದೆ.
ಅಗಸೂರು ನಿವಾಸಿಗಳಾದ ಬೊಮ್ಮಯ್ಯ ನಾಯಕ ಮತ್ತು ನಾರಾಯಣ ನಾಯಕ ಎನ್ನುವವರು ಮೃತ ದುರ್ದೈವಿಗಳಾಗಿದ್ದು ಅವರಿದ್ದ ಬೈಕ್‌ ಗೆ ಡಿಕ್ಕಿಯಾದ  ಲಾರಿಯು ಬೈಕ್ ಸವಾರರನ್ನು ಸುಮಾರು 20 ಮೀಟರ್ ದೂರದವರೆಗೆ ಎಳೆದೊಯ್ದಿದೆ ಎಂದು ತಿಳಿದು ಬಂದಿದೆ.
ಲಾರಿ ಚಾಲಕ ಲಾರಿಯನ್ನು ಅಪಘಾತ ಸ್ಥಳದ ಸಮೀಪ ಬಿಟ್ಟು ಓಡಿ ಹೋಗಿದ್ದು, ಅಂಕೋಲಾ ಪೊಲೀಸ್ ನಿರೀಕ್ಷಕ ಸಂತೋಷ ಶೆಟ್ಟಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಲಾರಿ ಚಾಲಕನ ಅಜಾಗರೂಕತೆಯ ಚಾಲನೆ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದ್ದು 112 ತುರ್ತು ವಾಹನ ಸಿಬ್ಬಂದಿಗಳು, ಪೊಲೀಸ್ ಸಿಬ್ಬಂದಿಗಳು ಅಪಘಾತಗೊಂಡ ವಾಹನ ತೆರುವುಗೊಳಿಸಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!