ಕಾರಿಗೆ ಲಾರಿ ಡಿಕ್ಕಿ: ನಾಲ್ವರಿಗೆ ಗಂಭೀರ ಗಾಯ

ಹೊಸದಿಗಂತ ವರದಿ ಅಂಕೋಲಾ:

ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಕಾರವಾರ ತಾಲೂಕಿನ ಅಮದಳ್ಳಿ ಗ್ರಾಮದ ಕಂತ್ರಿವಾಡಾ ನಿವಾಸಿಗಳಾದ ದಿನೇಶ ಅಶೋಕ ಕಂತ್ರಿಕರ(34), ನವೀನ ಅನೀಲ ಕಂತ್ರಿಕರ (23), ರೋಹಿತ ಸುಭಾಷ ಕಂತ್ರಿಕರ (23) ಮತ್ತು ಅವರ್ಸಾ ನಿವಾಸಿ ರಾಜಾರಾಮ ಅಶೋಕ ಠಾಕರಕರ್(23) ಅಘಾತದಲ್ಲಿ ಗಂಭೀರ ಗಾಯಗೊಂಡಿದ್ದಾರೆ.

ಅಂಕೋಲಾ ಕಡೆಯಿಂದ ಕುಮಟಾ ಕಡೆ ಸಾಗುತ್ತಿದ್ದ ಲಾರಿಯು ಚಾಲಕನ ಅತಿ ವೇಗ ಮತ್ತು ನಿರ್ಲಕ್ಷ್ಯದಿಂದ ಎದುರಿಗೆ ಹೋಗುತ್ತಿದ್ದ ರಿಕ್ಷಾ ಓವರ್ ಟೇಕ್ ಮಾಡಲು ಹೋಗಿ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಈ ಕುರಿತು ಅಂಕೋಲಾ ಪೊಲೀಸ್ ಠಾಣೆ ಯಲ್ಲಿ ದೂರು ದಾಖಲಾಗಿದ್ದು, ಲಾರಿ ಚಾಲಕ ಮಹಾರಾಷ್ಟ್ರದ ಪುಣೆ ನಿವಾಸಿ ಬಾಬುಷಾ ಗುಂಡಪ್ಪ ಭೋಜ್ ಎಂಬಾತನ ಮೇಲೆ ಅಂಕೋಲಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!