ಹೊಸದಿಗಂತ ವರದಿ ಯಲ್ಲಾಪುರ:
ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63 ರ ಅರಬೈಲ್ ಘಾಟ್ನ ಯೂ ಟರ್ನ್ ಬಳಿ ಲಾರಿಯೊಂದು ಕಂದಕಕ್ಕೆ ಉರುಳಿ ಬಿದ್ದು, ಲಾರಿ ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲೇ ದಾರುಣ ಸಾವು ಕಂಡಿದ್ದಾರೆ.
ಆಂಧ್ರಪ್ರದೇಶದ ಲಾರಿಯಾಗಿದ್ದು ಗ್ರಾನೈಟ್ ತುಂಬಿಕೊಂಡು ಯಲ್ಲಾಪುರದಿಂದ ಅಂಕೋಲಾ ಮಾರ್ಗವಾಗಿ ಮಂಗಳೂರಿಗೆ ಹೋಗುತಿದ್ದ ಸಮಯದಲ್ಲಿ ಈ ಘಟನೆ ಸಂಭವಿಸಿದೆ. ಲಾರಿ ಚಾಲಕನ ಅತಿ ವೇಗದಿಂದ ನಿಯಂತ್ರಣ ಸಿಗದೆ ಬ್ರೇಕ್ ಫೇಲ್ ಆಗಿ ಸಿಮೆಂಟ್ ಡಿವೈಡರ್ ಗೆ ಗುದ್ದಿದ ಬಳಿಕ ಮರಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಉರುಳಿ ಬಿದ್ದಿದೆ ಎನ್ನಲಾಗಿದೆ.
ನಿಯಂತ್ರಣಕ್ಕೆ ಸಿಗದೇ 100 ಅಡಿ ಆಳದ ಕಂದಕಕ್ಕೆ ಲಾರಿ ಬಿದ್ದು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಅಪಘಾತದ ರಭಸಕ್ಕೆ ದೇಹ ಛಿದ್ರ ಛಿದ್ರ ವಾಗಿ ಚಾಲಕ, ಕ್ಲೀನರ್ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಸ್ಥಳಕ್ಕೆ ಯಲ್ಲಾಪುರ ಪೊಲೀಸರು ತೆರಳಿ ಪರಿಶೀಲನೆ ನಡೆಸಿದರು.