ಚಲಿಸುತ್ತಿದ್ದ ಲಾರಿ ಟೈರ್‌ ಸ್ಫೋಟ, ಸುಟ್ಟು ಕರಕಲಾದ ವಾಹನ

ಹೊಸದಿಗಂತ ವರದಿ, ವಿಜಯಪುರ:

ಚಲಿಸುತ್ತಿದ್ದ ಲಾರಿಯ ಟೈರ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 50ರ ಅಬ್ಬಿಹಾಳ ಕ್ರಾಸ್ ಬಳಿ‌ ನಡೆದಿದೆ.
ಬಳ್ಳಾರಿಯಿಂದ ಔರಂಗಬಾದ್ ಗೆ ಕಲ್ಲಿದ್ದಿಲು ಪುಡಿ ಸಾಗಿಸುತ್ತಿದ್ದ ಲಾರಿಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಲಾರಿ ಬೆಂಕಿಗಾಹುತಿಯಾಗಿದೆ.
ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ, ಬೆಂಕಿ‌ ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ.
ನಿಡಗುಂದಿ ಪೊಲೀಸ್ ಠಾಣೆ ವ್ಯಾಪ್ತಿ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!