ಹೊಸದಿಗಂತ ವರದಿ, ಮಡಿಕೇರಿ:
ಖಾಲಿ ಸಿಲಿಂಡರ್’ಗಳನ್ನು ಸಾಗಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಕಾಫಿ ತೋಟಕ್ಕೆ ಮಗುಚಿದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸುಂಟಿಕೊಪ್ಪ ಸಮೀಪ ಸೆವೆಂತ್ ಮೈಲ್ ನಲ್ಲಿ ನಡೆದಿದೆ.
ಲಾರಿ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಮಂಗಳೂರಿನಿಂದ ಮೈಸೂರು ಕಡೆಗೆ ಖಾಲಿ ಸಿಲಿಂಡರ್ ಸಾಗಿಸುತ್ತಿದ್ದಾಗ ಘಟನೆ ನಡೆದಿದೆ. ಸ್ಥಳಕ್ಕೆ ಸುಂಟಿಕೊಪ್ಪ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.