Saturday, June 10, 2023

Latest Posts

ಮಾ. 25 ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ: ಎರಡು ದಿನ ನಂದಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮುದ್ದೇನಹಳ್ಳಿಗೆ ಮಾರ್ಚ್ 25 ರಂದು ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿರುವ ಹಿನ್ನೆಲೆಯಲ್ಲಿ ಪ್ರವಾಸಿ ತಾಣ ನಂದಿ ಗಿರಿಧಾಮಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
ನಾಳೆ ಬೆಳಗ್ಗೆ 10 ಗಂಟೆಯಿಂದ ಮಾರ್ಚ್ 25 ರ ಮಧ್ಯಾಹ್ನ 2 ಗಂಟೆಯವರೆಗೆ ನಂದಿ ಗಿರಿಧಾಮಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ನಂದಿ ಗಿರಿಧಾಮದ ಅತಿಥಿ ಗೃಹದಲ್ಲಿ ಅಧಿಕಾರಿಗಳು ತಂಗಿದ್ದಾರೆ. ಪೊಲೀಸರು, ಎಸ್.ಪಿ.ಜಿ., ಪ್ರಧಾನಮಂತ್ರಿ ಭದ್ರತಾ ಸಿಬ್ಬಂದಿ ವಾಸ್ತವ್ಯ ಹೂಡಿದ್ದಾರೆ. ಅಧಿಕಾರಿಗಳ ತುರ್ತು ಸಂಚಾರಕ್ಕೆ ಅನುಕೂಲ ಕಲ್ಪಿಸಲು ಸಾರ್ವಜನಿಕರಿಗೆ ನಂದಿ ಗಿರಿಧಾಮಕ್ಕೆ ನಿರ್ಬಂಧ ಹೇರಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!