ಹಾಸನದಲ್ಲಿ ಹುಚ್ಚುನಾಯಿ ಅಟ್ಟಹಾಸ: ಇಬ್ಬರು ಮಕ್ಕಳು ಸೇರಿ 8 ಜನರಿಗೆ ಕಚ್ಚಿದ ಶ್ವಾನ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಉಳ್ಳೇನಹಳ್ಳಿ ಗ್ರಾಮದಲ್ಲಿ ಹುಚ್ಚುನಾಯಿಯೊಂದು ರಕ್ಕಸನಂತೆ ಮುಗಿಬಿದ್ದು ಇಬ್ಬರು ಮುಗ್ಧ ಮಕ್ಕಳು ಸೇರಿದಂತೆ ಒಟ್ಟು ಎಂಟು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಗ್ರಾಮದ ರಸ್ತೆಯಲ್ಲಿ ಓಡಾಡುತ್ತಿದ್ದವರ ಮೇಲೆ ನಾಯಿ ದಿಢೀರ್ ದಾಳಿ ನಡೆಸಿದ್ದು, ಸದ್ಯ ಇಡೀ ಗ್ರಾಮದಲ್ಲಿ ತೀವ್ರ ಆತಂಕ ಮತ್ತು ಭೀತಿಯ ವಾತಾವರಣ ನಿರ್ಮಾಣವಾಗಿದೆ. ರಾಜು, ರಘು, ಅಂಜಲಿ, ಮಂಜಯ್ಯ ಹಾಗೂ ಇಬ್ಬರು ಅಪ್ರಾಪ್ತ ಮಕ್ಕಳು ಸೇರಿದಂತೆ ಒಟ್ಟು 8 ಜನರಿಗೆ ನಾಯಿ ದೇಹದ ವಿವಿಧ ಭಾಗಗಳಿಗೆ ಕಚ್ಚಿ … Continue reading ಹಾಸನದಲ್ಲಿ ಹುಚ್ಚುನಾಯಿ ಅಟ್ಟಹಾಸ: ಇಬ್ಬರು ಮಕ್ಕಳು ಸೇರಿ 8 ಜನರಿಗೆ ಕಚ್ಚಿದ ಶ್ವಾನ!