ನಟ ಶಿವರಾಜ್ ಕುಮಾರ್ ಭೇಟಿಯಾಗಿ ಕ್ಷಮೆ ಕೇಳಿದ ಮಡೆನೂರು ಮನು

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಟ ಶಿವರಾಜ್ ಕುಮಾರ್ ಅವರನ್ನು ಭೇಟಿಯಾಗಿ ನಟ ಮಡೆನೂರು ಮನು ಕಾಲಿಗೆ ಬಿದ್ದು ಕ್ಷಮೆ ಕೇಳಿದ್ದಾರೆ.

ಇಂದು ಕಂಠೀರವ ಸ್ಟೂಡಿಯೋದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರನ್ನು ನಟ ಮಡೆನೂರು ಮನು ಭೇಟಿಯಾಗಿದ್ದಾರೆ.

ಮಡೆನೂರು ಮನು ಬಂಧನದ ಬಳಿಕ ನಟ ಶಿವರಾಜ್‌ಕುಮಾರ್, ದರ್ಶನ್, ಧ್ರುವ ಸರ್ಜಾ ಅವರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ ಎನ್ನಲಾಗಿರುವ ಆಡಿಯೋ ವೈರಲ್ ಆಗಿತ್ತು. ಆ ಆಡಿಯೋದಲ್ಲಿ ಶಿವಣ್ಣ ಬಗ್ಗೆ ಅವಹೇಳನಕಾರಿಯಾಗಿ ಮಾತಾಡಿದ್ದಕ್ಕೆ ರಾಜ್‌ ಕುಮಾರ್‌ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಹೀಗಾಗಿ ಮನು ಶಿವಣ್ಣ ಮನೆ ಬಳಿ ಹೋಗಿದ್ದರು. ಆದ್ರೆ ಶಿವಣ್ಣ ಅವರನ್ನು ಭೇಟಿ ಆಗೋದಕ್ಕೆ ಆಗಿರಲಿಲ್ಲ.

ಇಂದು ಕಂಠೀರವ ಸ್ಟುಡಿಯೋಗೆ ಶಿವಣ್ಣ ಬರುವ ಸುದ್ದಿ ಕೇಳಿ ಅಲ್ಲಿಗೆ ಮಡೆನೂರು ಮನು‌ ಹೋಗಿದ್ದಾರೆ. ಕಾರಿನಿಂದ ಇಳಿಯುತ್ತಿದ್ದಂತೆ ಶಿವಣ್ಣನ ಕಾಲಿಗೆ ಬಿದ್ದು ಮಡೆನೂರು ಮನು‌ ಕ್ಷಮೆ ಕೇಳಿದ್ದಾರೆ. ಆಗ ಶಿವಣ್ಣನ ಬಳಿ ಮತ್ತೆ ನಾವು ಕುಲದಲ್ಲಿ ಕೀಳ್ಯಾವುದೋ ಸಿನಿಮಾವನ್ನು ರೀ ರಿಲೀಸ್ ಮಾಡಬೇಕು ಅಂತ ಅಂದುಕೊಂಡಿದ್ದೀವಿ. ನೀವು ಒಪ್ಪಿಗೆ ಕೊಟ್ಟರೆ ಸಿನಿಮಾ ರೀ ರಿಲೀಸ್ ಮಾಡುತ್ತೇವೆ ಅಣ್ಣ ಅಂತ ಕೇಳಿಕೊಂಡಿದ್ದಾರೆ. ಆಗ ಶಿವಣ್ಣ ಕುಲದಲ್ಲಿ ಕೀಳ್ಯಾವುದೋ ಸಿನಿಮಾ ರೀ ರಿಲೀಸ್ ಮಾಡಿ ಅಂತ ಒಪ್ಪಿಗೆ ಕೊಟ್ಟಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!